ಮಥುರಾ, ಉತ್ತರ ಪ್ರದೇಶ: ಶಾಹಿ ಈದ್ಗಾ ಮಸೀದಿಯ ಆವರಣದಲ್ಲಿ ಶ್ರೀ ಕೃಷ್ಣ ದೇವರಿಗೆ ಜಲಾಭಿಷೇಕ ನಡೆಸಲು ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಪುನರ್ಪರಿಶೀಲನಾ ಅರ್ಜಿಯನ್ನು ಮಥುರಾ ಜಿಲ್ಲಾ ಕೋರ್ಟ್ ತಿರಸ್ಕರಿಸಿದೆ. ಕೃಷ್ಣನ ಜನ್ಮಸ್ಥಳದಲ್ಲಿ ಮಸೀದಿಯನ್ನು ಕಟ್ಟಲಾಗಿದೆ ಎಂಬುದು ಅರ್ಜಿದಾರರ ನಂಬಿಕೆಯಾಗಿದೆ.
ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಖಜಾಂಜಿ ದಿನೇಶ್ ಶರ್ಮಾ ಅವರು ಪುನರ್ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದರು. ಮಸೀದಿಯ ಒಳಗೆ ಶ್ರೀ ಕೃಷ್ಣನ ನಿಜವಾದ ಜನ್ಮಸ್ಥಳವಿದೆ. ಜಲಾಭಿಷೇಕ ನಡೆಸಲು ಅನುವು ಮಾಡಿಕೊಡಬೇಕು ಎಂದು ಶರ್ಮಾ ಅರ್ಜಿಯಲ್ಲಿ ಹಕ್ಕೊತ್ತಾಯ ಮಾಡಿದ್ದರು.
ಶ್ರೀಕೃಷ್ಣ ಜನ್ಮಭೂಮಿ ಮಥುರಾದ ಕಟ್ರಾ ಕೇಶವ ದೇವ ದೇವಸ್ಥಾನದ ಜಾಗದಲ್ಲಿ ನಿರ್ಮಿಸಲಾಗಿದೆ ಎನ್ನಲಾದ ಶಾಹಿ ಮಸೀದಿ ಈದ್ಗಾ ಸ್ಥಳಾಂತರಿಸಲು ಕೋರಿ ಹಲವಾರು ಅರ್ಜಿಗಳು ಮಥುರಾ ಕೋರ್ಟ್ನಲ್ಲಿ ಸಲ್ಲಿಕೆಯಾಗಿವೆ.