ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಥುರಾ: ಶಾಹಿ ಈದ್ಗಾ ಮಸೀದಿಯ ಹಿಂದೂ ಧಾರ್ಮಿಕ ಕುರುಹುಗಳ ರಕ್ಷಣೆ ಕೋರಿ ಅರ್ಜಿ

ಅಕ್ಷರ ಗಾತ್ರ

ಮಥುರಾ: ಶ್ರೀ ಕೃಷ್ಣ ಜನ್ಮಭೂಮಿ- ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಾಚೀನ ಹಿಂದೂ ಧಾರ್ಮಿಕ ಕುರುಹುಗಳ ರಕ್ಷಣೆ ಕೋರಿ ಅರ್ಜಿ ಸಲ್ಲಿಸಲಾಗಿದೆ.

ಮಸೀದಿಯನ್ನು ಬಂದ್ ಮಾಡಿ ಭದ್ರತೆ ಒದಗಿಸಬೇಕೆಂದು ಮಹೇಂದ್ರ ಪ್ರತಾಪ್ ಸಿಂಗ್ ಎಂಬುವರು ಸಿವಿಲ್ ಕೋರ್ಟ್‌ನ ಹಿರಿಯ ನ್ಯಾಯಾಧೀಶರ ಮುಂದೆ ಅರ್ಜಿ ಸಲ್ಲಿಸಿದ್ದಾರೆ.

ವಿವಾದಕ್ಕೆ ಸಂಬಂಧಿಸಿದಂತೆ ತ್ವರಿತ ವಿಚಾರಣೆಗೆ ಅಲಹಾಬಾದ್ ಹೈಕೋರ್ಟ್ ಮೇ 12ರಂದು ನಿರ್ದೇಶನ ನೀಡಿತ್ತು. ಮರು ದಿನವೇ, ಶೀಘ್ರ ಹಿರಿಯ ಅಡ್ವೊಕೇಟ್‌ ಕಮಿಷನರ್ ನೇಮಿಸುವಂತೆ ಕೋರಿ ಮಥುರಾ ನ್ಯಾಯಾಲಯದಲ್ಲಿ ಎರಡು ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಮಸೀದಿ ಸ್ಥಳದಲ್ಲಿ ಹಿಂದೂ ದೇವಾಲಯ ಇದ್ದ ಕುರುಹುಗಳನ್ನು ಪರಿಶೀಲಿಸಲು, ಕುರುಹುಗಳನ್ನು ವಿರೂಪಗೊಳಿಸಲು ಅಥವಾ ನಾಶಪಡಿಸಲು ಅವಕಾಶ ನೀಡದಿರಲು ಶೀಘ್ರವೇ ಕಮಿಷನರ್‌ ಅವರನ್ನು ನೇಮಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಮನೀಷ್ ಯಾದವ್ ಅವರು ಸಿವಿಲ್ ನ್ಯಾಯಾಲಯದ (ಹಿರಿಯ ವಿಭಾಗ) ನ್ಯಾಯಾಧೀಶರಾದ ಜ್ಯೋತಿ ಸಿಂಗ್ ಅವರಿಗೆ ಅರ್ಜಿ ಸಲ್ಲಿಸಿದ್ದರು. ಭಗವಾನ್ ಶ್ರೀಕೃಷ್ಣ ವಿರಾಜಮಾನರಾಗಿರುವ ಮಸೀದಿಯಲ್ಲಿ ಹಿಂದೂ ದೇವಾಲಯದ ಕುರುಹುಗಳು ಇರುವುದನ್ನು ಪರಿಶೀಲಿಸಲೂ ಯಾದವ್‌ ರಿಟ್ ಅರ್ಜಿ ಸಲ್ಲಿಸಿದ್ದರು. ಎರಡನೆಯ ಅರ್ಜಿಯನ್ನು ದಿನೇಶ್ ಎಂಬ ಭಕ್ತರೊಬ್ಬರು ಸಲ್ಲಿಸಿದ್ದರು.

ಕಳೆದ ಹಲವು ವರ್ಷಗಳಿಂದ ಈ ವಿವಾದಕ್ಕೆ ಸಂಬಂಧಿಸಿ 10 ಅರ್ಜಿಗಳು ಮಥುರಾ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT