ಲಖನೌ: ‘ರಾಮಚರಿತಮಾನಸ’ ಕುರಿತು ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ವಿವಾದಾತ್ಮಕ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಪಕ್ಷಕ್ಕೆ ಯಾವುದೇ ಸಂಬಂಧವಿಲ್ಲ. ಪಕ್ಷವು ಭಗವಾನ್ ರಾಮ ಮತ್ತು ಕೃಷ್ಣನ ಆದರ್ಶಗಳನ್ನು ಅನುಸರಿಸುತ್ತದೆ ಎಂದು ಸಮಾಜವಾದಿ ಪಕ್ಷದ ಹಿರಿಯ ನಾಯಕ ಶಿವಪಾಲ್ ಸಿಂಗ್ ಯಾದವ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.