‘ಚುನಾವಣಾ ಮೈತ್ರಿಯು ಪಕ್ಷಕ್ಕೆ ಕಹಿ ಅನುಭವವನ್ನೇ ನೀಡಿದೆ. ನಮ್ಮ ಮತಗಳು ಮಿತ್ರಪಕ್ಷಗಳಿಗೆ ವರ್ಗಾವಣೆಯಾಗಿವೆ. ಆದರೆ ಅವರ ಮತಗಳು ನಮಗೆ ಬಂದಿಲ್ಲ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ. ಪಶ್ಚಿಮ ಬಂಗಾಳ, ಕೇರಳ, ಪುದುಚೇರಿ ಮತ್ತು ತಮಿಳುನಾಡಿನಲ್ಲಿ ನಾವು ಯಾರ ಜತೆಗೂ ಮೈತ್ರಿ ಮಾಡಿಕೊಂಡಿಲ್ಲ’ ಎಂದು ಮಾಧ್ಯಮಪ್ರತಿನಿಧಿಗಳ ಜತೆ ಮಾತನಾಡುತ್ತಾ ಅವರು ತಿಳಿಸಿದರು.