<p><strong>ಲಖನೌ</strong>: ‘ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಮಜನ್ಮಭೂಮಿ ವಿವಾದಕ್ಕೆ ತೆರೆ ಎಳೆದು, ರಾಮಮಂದಿರ ನಿರ್ಮಾಣಕ್ಕೆ ಅವಕಾಶ ನೀಡಿದ್ದು ಸುಪ್ರೀಂ ಕೋರ್ಟ್. ಹಾಗಾಗಿ, ಮಂದಿರ ನಿರ್ಮಾಣದ ಶ್ರೇಯಸ್ಸು ಸುಪ್ರೀಂ ಕೋರ್ಟ್ಗೆ ಸಲ್ಲಬೇಕು‘ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ನಾಯಕಿ ಮಾಯಾವತಿ ಹೇಳಿದ್ದಾರೆ.</p>.<p>ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು,‘ಅಯೋಧ್ಯೆಯು ಎಲ್ಲಾ ಧರ್ಮದವರ ಪವಿತ್ರ ಸ್ಥಳವಾಗಿದೆ. ಇದು ಎಲ್ಲರಿಗೂ ತಿಳಿದ ವಿಷಯ. ರಾಮಮಂದಿರ ಹಾಗೂ ಬಾಬ್ರಿ ಮಸೀದಿಯ ಭೂ ವಿವಾದದಿಂದಾಗಿ ಈ ಸ್ಥಳ ಸುದ್ದಿಯಲ್ಲಿತ್ತು. ಹಲವು ವರ್ಷಗಳ ಈ ವಿವಾದಕ್ಕೆ ಸುಪ್ರೀಂಕೋರ್ಟ್ ತೆರೆ ಎಳೆದಿದೆ. ಈ ವಿವಾದವನ್ನು ರಾಜಕೀಯಗೊಳಿಸಲು ಹೊರಟಿದ್ದ ಕೆಲ ಪಕ್ಷಗಳ ಪ್ರಯತ್ನಕ್ಕೂ ಅಂತ್ಯ ಹಾಡಿದೆ’ ಎಂದು ಹೇಳಿದ್ದಾರೆ.</p>.<p>‘ಸುಪ್ರೀಂಕೋರ್ಟ್ ತೀರ್ಪು, ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಹಾದಿಯನ್ನು ಸುಗಮಗೊಳಿಸಿದೆ. ನಮ್ಮ ಪಕ್ಷವು ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತದೆ ಎಂದು ಈ ಹಿಂದೆಯೇ ಹೇಳಿದ್ದೆವು. ಅದಕ್ಕೆ ಬದ್ಧರಾಗಿದ್ದೇವೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ‘ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಮಜನ್ಮಭೂಮಿ ವಿವಾದಕ್ಕೆ ತೆರೆ ಎಳೆದು, ರಾಮಮಂದಿರ ನಿರ್ಮಾಣಕ್ಕೆ ಅವಕಾಶ ನೀಡಿದ್ದು ಸುಪ್ರೀಂ ಕೋರ್ಟ್. ಹಾಗಾಗಿ, ಮಂದಿರ ನಿರ್ಮಾಣದ ಶ್ರೇಯಸ್ಸು ಸುಪ್ರೀಂ ಕೋರ್ಟ್ಗೆ ಸಲ್ಲಬೇಕು‘ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ನಾಯಕಿ ಮಾಯಾವತಿ ಹೇಳಿದ್ದಾರೆ.</p>.<p>ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು,‘ಅಯೋಧ್ಯೆಯು ಎಲ್ಲಾ ಧರ್ಮದವರ ಪವಿತ್ರ ಸ್ಥಳವಾಗಿದೆ. ಇದು ಎಲ್ಲರಿಗೂ ತಿಳಿದ ವಿಷಯ. ರಾಮಮಂದಿರ ಹಾಗೂ ಬಾಬ್ರಿ ಮಸೀದಿಯ ಭೂ ವಿವಾದದಿಂದಾಗಿ ಈ ಸ್ಥಳ ಸುದ್ದಿಯಲ್ಲಿತ್ತು. ಹಲವು ವರ್ಷಗಳ ಈ ವಿವಾದಕ್ಕೆ ಸುಪ್ರೀಂಕೋರ್ಟ್ ತೆರೆ ಎಳೆದಿದೆ. ಈ ವಿವಾದವನ್ನು ರಾಜಕೀಯಗೊಳಿಸಲು ಹೊರಟಿದ್ದ ಕೆಲ ಪಕ್ಷಗಳ ಪ್ರಯತ್ನಕ್ಕೂ ಅಂತ್ಯ ಹಾಡಿದೆ’ ಎಂದು ಹೇಳಿದ್ದಾರೆ.</p>.<p>‘ಸುಪ್ರೀಂಕೋರ್ಟ್ ತೀರ್ಪು, ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಹಾದಿಯನ್ನು ಸುಗಮಗೊಳಿಸಿದೆ. ನಮ್ಮ ಪಕ್ಷವು ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತದೆ ಎಂದು ಈ ಹಿಂದೆಯೇ ಹೇಳಿದ್ದೆವು. ಅದಕ್ಕೆ ಬದ್ಧರಾಗಿದ್ದೇವೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>