ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಮಾಯಾವತಿ ಅವರು,‘ಉತ್ತರ ಪ್ರದೇಶ ಸರ್ಕಾರವು ತರಾತುರಿಯಲ್ಲಿ ಲವ್ ಜಿಹಾದ್ ವಿರುದ್ಧ ಹೊರಡಿಸಿದ ಸುಗ್ರೀವಾಜ್ಞೆ ಅನುಮಾನ ಮತ್ತು ಆತಂಕಗಳಿಂದ ಕೂಡಿದೆ. ನಮ್ಮ ದೇಶದಲ್ಲಿ ವಂಚನೆ ಮತ್ತು ಒತ್ತಾಯಪೂರ್ವಕ ಮತಾಂತರಕ್ಕೆ ಯಾವುದೇ ಮಾನ್ಯತೆಯಿಲ್ಲ. ಈಗಾಗಲೇ ಇದಕ್ಕಾಗಿ ಹಲವಾರು ಕಾನೂನುಗಳಿವೆ. ಹಾಗಾಗಿ ಉತ್ತರ ಪ್ರದೇಶ ಸರ್ಕಾರವು ಈ ಹೊಸ ಕಾಯ್ದೆ ಬಗ್ಗೆ ಮರುಪರಿಶೀಲನೆ ಮಾಡಬೇಕು’ ಎಂದರು.