ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಥರಸ್ ಪ್ರಕರಣ: ಉತ್ತರ ಪ್ರದೇಶ ಸರ್ಕಾರದ ಕಾರ್ಯವೈಖರಿ ಪ್ರಶ್ನಿಸಿದ ಮಾಯಾವತಿ

Last Updated 22 ಮಾರ್ಚ್ 2021, 9:50 IST
ಅಕ್ಷರ ಗಾತ್ರ

ಲಖನೌ: ‘ಹಾಥರಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಕೆಲವೊಂದು ಹೊಸ ವಿಷಯಗಳು ಬೆಳಕಿಗೆ ಬಂದಿವೆ. ಇದು ಉತ್ತರ ಪ್ರದೇಶ ಸರ್ಕಾರದ ಕಾರ್ಯವೈಖರಿ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟು ಹಾಕಿದೆ’ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಯಾವತಿ ಅವರು ಸೋಮವಾರ ವಾಗ್ದಾಳಿ ನಡೆಸಿದರು.

ಮಾರ್ಚ್‌ 5 ರಂದು ವಿಶೇಷ ನ್ಯಾಯಾಧೀಶರು ನಡೆಸಿದ ವಿಚಾರಣೆ ವೇಳೆ ಸಂತ್ರಸ್ತೆಯ ಪರ ವಕೀಲರು ಮತ್ತು ಸಾಕ್ಷಿಗಳಿಗೆ ಬೆದರಿಕೆಯೊಡ್ಡಲಾಗಿತ್ತು ಎಂದು ಸಂತ್ರಸ್ತೆಯ ಅಣ್ಣ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ತನಿಖೆ ನಡೆಸುವಂತೆ ಹಾಥರಸ್‌ ಜಿಲ್ಲಾ ನ್ಯಾಯಾಧೀಶರು ಮತ್ತು ಸಿಆರ್‌ಪಿಎಫ್‌ನ ಇನ್‌ಸ್ಪೆಕ್ಟರ್‌ ಜನರಲ್‌ಗೆ ಅಲಹಾಬಾದ್‌ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಇದರ ಬೆನ್ನಲ್ಲೇ ಟ್ವೀಟ್‌ ಮಾಡಿರುವ ಮಾಯಾವತಿ,‘ನ್ಯಾಯ ಪಡೆಯಲು ಹಾಥರಸ್‌ ಸಂತ್ರಸ್ತೆಯ ಕುಟುಂಬ ಪಡುತ್ತಿರುವ ಕಷ್ಟದ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೆ ಈ ಪ್ರಕರಣದಲ್ಲಿ ಬೆಳಕಿಗೆ ಬಂದಿರುವ ಹೊಸ ವಿಷಯಗಳು ಉತ್ತರ ‍ಪ್ರದೇಶ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಗಂಭೀರ ಸ್ವರೂಪದ ಪ್ರಶ್ನೆಗಳು ಎದ್ದಿವೆ’ ಎಂದಿದ್ದಾರೆ.

‘ಅಲಹಾಬಾದ್‌ ಹೈಕೋರ್ಟ್‌ನ ಈ ನಿರ್ದೇಶನವು ಉತ್ತರ ಪ್ರದೇಶ ಸರ್ಕಾರದ ನೆಮ್ಮದಿಯನ್ನು ಹಾಳುಮಾಡಿದೆ. ಉತ್ತರ ಪ್ರದೇಶದಲ್ಲಿ ಅಪರಾಧಿಗಳು ಆಳುತ್ತಾರೆ. ಇಲ್ಲಿ ನ್ಯಾಯ ಸಿಗುವುದು ಕಷ್ಟ ಎಂಬ ಗ್ರಹಿಕೆ ಜನಸಾಮಾನ್ಯರಲ್ಲಿದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT