ಗೊಂಡ ಜಿಲ್ಲೆಯ ತಿರ್ರೆ ಮನೋರಮಾ ಗ್ರಾಮದ 30 ಎಕರೆಯಲ್ಲಿರುವ ರಾಮ್ಜಂಕಿ ದೇವಾಲಯದ ಅರ್ಚಕ ಮತ್ತು ಕೆಲವು ಗ್ರಾಮಸ್ಥರ ನಡುವೆ ಜಮೀನು ಕುರಿತು ವಿವಾದವಿತ್ತು. ಅರ್ಚಕ ಅತುಲ್ ಬಾಬಾ ಅಲಿಯಾಸ್ ಸಾಮ್ರಾಟ್ ದಾಸ್ ಮೇಲೆ ಭಾನುವಾರ ಬೆಳಿಗ್ಗೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಈ ಘಟನೆಯಲ್ಲಿ ಅವರ ಎಡಬುಜಕ್ಕೆ ಗಾಯವಾಗಿತ್ತು. ಗಾಯಗೊಂಡ ಅರ್ಚಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಲಖನೌದ ಕಿಂಜ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಕಳುಹಿಸಲಾಗಿತ್ತು. ದಾಸ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.