ಲಖನೌ: ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳು (ಎಸ್ಪಿ) ಕೇವಲ ಭರವಸೆಗಳನ್ನಷ್ಟೇ ನೀಡುತ್ತಿದ್ದು, ಅವುಗಳನ್ನು ಈಡೇರಿಸುವುದಿಲ್ಲ. ಹೀಗಾಗಿ ಉತ್ತರ ಪ್ರದೇಶದಲ್ಲಿ ಬಿಎಸ್ಪಿಯನ್ನು ಮತ್ತೆ ಅಧಿಕಾರಕ್ಕೇರುವಂತೆ ಮಾಡಲು ಬ್ರಾಹ್ಮಣರು ಮತ್ತು ದಲಿತರು ಒಗ್ಗಟ್ಟಾಗಬೇಕು ಎಂದು ಪಕ್ಷದ ವರಿಷ್ಠೆ ಮಾಯಾವತಿ ಕರೆ ನೀಡಿದ್ದಾರೆ.