ಐಷಾರಾಮಿ ಖರ್ಚು ನಿಲ್ಲಿಸಿ, ಶಾಲಾ–ಕಾಲೇಜು ಶುಲ್ಕ ಮನ್ನಾ ಮಾಡಿ: ಮಾಯಾವತಿ ಒತ್ತಾಯ

ಲಖನೌ: ಐಷಾರಾಮಿ ವೆಚ್ಚಗಳನ್ನು ಕಡಿತ ಮಾಡಿ, ಸಾರ್ವಜನಿಕರ ಹಿತ ದೃಷ್ಟಿಯಿಂದ ವಿದ್ಯಾರ್ಥಿಗಳ ಶಾಲಾ–ಕಾಲೇಜು ಶುಲ್ಕವನ್ನು ಮನ್ನಾ ಮಾಡುವಂತೆ ಬಹುಜನ ಸಮಾವಾದ ಪಾರ್ಟಿಯ ಮುಖ್ಯಸ್ಥೆ ಮಾಯಾವತಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಮಾಯಾವತಿ, ‘ಕೊರೊನಾ – ಲಾಕ್ಡೌನ್ ಕಾರಣದಿಂದಾಗಿ ಕೋಟ್ಯಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಅನಿರೀಕ್ಷಿತವಾಗಿ ಎದುರಾದ ಈ ಸಮಸ್ಯೆಯಿಂದಾಗಿ ಪೋಷಕರಿಗೆ, ಮಕ್ಕಳ ಶಾಲಾ–ಕಾಲೇಜು ಶುಲ್ಕವನ್ನು ಭರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ದುರ್ದೈವದ ಸಂಗತಿ‘ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಎದುರಾಗಿರುವ ಸಮಸ್ಯೆಯನ್ನು ದೇವರ ಆಟ ಎಂದು ಹೇಳಿರುವ ಕೇಂದ್ರ ಸರ್ಕಾರ, ಸಂವಿಧಾನದ ಪ್ರಕಾರ ದೇಶದ ಕಲ್ಯಾಣಕ್ಕಾಗಿ ಕಡ್ಡಾಯವಾಗಿ ಶ್ರಮಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಐಷಾರಾಮಿ ಖರ್ಚುಗಳನ್ನುಕಡಿಮೆ ಮಾಡಿ, ಈಗಾಗಲೇ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ನೀಡಿರುವ ಶುಲ್ಕವನ್ನು ಪೋಷಕರಿಗೆ ವಾಪಸ್ ಕೊಡಿಸಬೇಕು ಮತ್ತು ಶಾಲಾ ಶುಲ್ಕವನ್ನೂ ಮನ್ನಾ ಮಾಡಬೇಕು‘ ಎಂದು ಮತ್ತೊಂದು ಟ್ವೀಟ್ನಲ್ಲಿ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.