ಸಮಾಜವಾದಿ ಪಕ್ಷದ ಕಾರ್ಯ ವೈಖರಿ ಬಗ್ಗೆ ಮುಸ್ಲಿಮರು ಅಸಮಾಧಾನಗೊಂಡಿದ್ದಾರೆ. ಬಿಎಸ್ಪಿಗೆ ದಲಿತರು ಮಾತ್ರವಲ್ಲದೆ ಮುಸ್ಲಿಂ, ಹಿಂದುಳಿದ ವರ್ಗ ಮತ್ತು ಮೇಲ್ಜಾತಿಯ ಬೆಂಬಲವಿದೆ ಎಂದು ಹೇಳಿದರು.
ಸಮಾಜವಾದಿ ಪಕ್ಷ ಸರ್ಕಾರ ರಚಿಸುವ ಕನಸು ಕಾಣುತ್ತಿದ್ದು, ಆ ಕನಸು ಭಗ್ನವಾಗಲಿದೆ. ಎಸ್ಪಿ ಅಧಿಕಾರದಲ್ಲಿದ್ದಾಗ ದಲಿತರು, ಹಿಂದುಳಿದ ವರ್ಗದವರು, ಬಡವರು ಮತ್ತು ಬ್ರಾಹ್ಮಣರು ಕಿರುಕುಳಕ್ಕೊಳಗಾಗಿದ್ದರು ಎಂದು ಆರೋಪಿಸಿದರು.