<p><strong>ಶ್ರೀನಗರ:</strong> ಉಗ್ರ ಚಟುವಟಿಕೆಗಳಿಗೆ ಹಣಕಾಸು ಒದಗಿಸಲು ಪಾಕಿಸ್ತಾನದ ಎಂಬಿಬಿಎಸ್ ಸೀಟುಗಳನ್ನು ಕಾಶ್ಮೀರದ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಜಮ್ಮು–ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.</p>.<p>ಪಾಕಿಸ್ತಾನದ ಎಂಬಿಬಿಎಸ್ ಸೀಟುಗಳನ್ನು ಕಾಶ್ಮೀರದ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ನಾಲ್ವರು ಪ್ರತ್ಯೇಕತಾವಾದಿಗಳನ್ನು ಜಮ್ಮು–ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ, ಹುರಿಯತ್ ಕಾನ್ಫರೆನ್ಸ್ನ ಹಿರಿಯ ನಾಯಕರೊಬ್ಬರೂ ಇದ್ದಾರೆ.</p>.<p><strong>ಓದಿ:</strong><a href="https://www.prajavani.net/world-news/uae-says-afghanistan-president-ashraf-ghani-is-in-the-country-858907.html" itemprop="url">ಆಫ್ಗಾನ್ನಿಂದ ಪಲಾಯನ ಮಾಡಿದ್ದ ಅಧ್ಯಕ್ಷ ಅಶ್ರಫ್ ಘನಿ ದುಬೈನಲ್ಲಿ ಪತ್ತೆ</a></p>.<p>ಮೊಹಮ್ಮದ್ ಅಕ್ಬರ್ ಭಟ್ ಅಲಿಯಾಸ್ ಜಾಫರ್ ಅಕ್ಬರ್ ಭಟ್, ಫಾತಿಮಾ ಶಾ, ಮೊಹಮ್ಮದ್ ಅಬ್ದುಲ್ಲಾ ಶಾ ಮತ್ತು ಸಬ್ಜಾರ್ ಅಹ್ಮದ್ ಶೇಖ್ ಬಂಧಿತರು. ಇವರನ್ನು ಜಮ್ಮು–ಕಾಶ್ಮೀರ ಪೊಲೀಸ್ ಸಿಐಡಿ ವಿಭಾಗದ ‘ಕೌಂಟರ್ ಇಂಟೆಲಿಜೆನ್ಸ್ (ಕಾಶ್ಮೀರ)’ ವಿಭಾಗವು ಬಂಧಿಸಿದೆ.</p>.<p>ಕೆಲವು ಮಂದಿ ಹುರಿಯತ್ ನಾಯಕರೂ ಸೇರಿದಂತೆ ಕೆಲವು ಅಪರಿಚಿತರು ಪಾಕಿಸ್ತಾನದ ಕಾಲೇಜುಗಳು, ವಿಶ್ವವಿದ್ಯಾಲಯಗಳ ಎಂಬಿಬಿಎಸ್ ಮತ್ತು ಇತರ ವೃತ್ತಿಪರ ಕೋರ್ಸ್ಗಳ ಸೀಟನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿಯ ಆಧಾರದಲ್ಲಿ ಕಳೆದ ವರ್ಷ ಜುಲೈನಲ್ಲೇ ಪ್ರಕರಣ ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಪ್ರಬಲ ಸಾಕ್ಷ್ಯಾಧಾರಗಳಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದೂ ಜಮ್ಮು–ಕಾಶ್ಮೀರ ಪೊಲೀಸ್ ಪ್ರಕಟಣೆ ತಿಳಿಸಿದೆ.</p>.<p><strong>ಓದಿ:</strong><a href="https://www.prajavani.net/world-news/escorted-by-taliban-indias-midnight-evacuation-from-afghanistan-858792.html" itemprop="url">ಸ್ವದೇಶಕ್ಕೆ ತೆರಳಲು ಭಾರತೀಯರಿಗೆ ತಾಲಿಬಾನ್ ಬೆಂಗಾವಲು!</a></p>.<p>‘ವಿದ್ಯಾರ್ಥಿಗಳ ಪೋಷಕರಿಂದ ಸಂಗ್ರಹಿಸಿದ ಹಣವನ್ನು ಭಾಗಶಃ, ಭಯೋತ್ಪಾದನೆ, ಪ್ರತ್ಯೇಕತಾವಾದವನ್ನು ಬೆಂಬಲಿಸಲು ಮತ್ತು ಆ ಚಟುವಟಿಕೆಗಳ ನಿಧಿಗಾಗಿ ವಿವಿಧ ರೀತಿಯಲ್ಲಿ ಬಳಸಲಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಎಂಬಿಬಿಎಸ್ ಮತ್ತು ಇತರ ವೃತ್ತಿಪರ ಕೋರ್ಸ್ಗಳ ಸೀಟನ್ನು ಮಾರಾಟ ಮಾಡುವ ಸಂದರ್ಭದಲ್ಲಿ, ಕಾಶ್ಮೀರದಲ್ಲಿ ಹತ್ಯೆಗೀಡಾಗಿರುವ ಉಗ್ರರ ಕುಟುಂಬದವರು ಮತ್ತು ಅವರ ಆಪ್ತರಿಗೆ ಆದ್ಯತೆ ನೀಡಲಾಗಿತ್ತು ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಉಗ್ರ ಚಟುವಟಿಕೆಗಳಿಗೆ ಹಣಕಾಸು ಒದಗಿಸಲು ಪಾಕಿಸ್ತಾನದ ಎಂಬಿಬಿಎಸ್ ಸೀಟುಗಳನ್ನು ಕಾಶ್ಮೀರದ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಜಮ್ಮು–ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.</p>.<p>ಪಾಕಿಸ್ತಾನದ ಎಂಬಿಬಿಎಸ್ ಸೀಟುಗಳನ್ನು ಕಾಶ್ಮೀರದ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ನಾಲ್ವರು ಪ್ರತ್ಯೇಕತಾವಾದಿಗಳನ್ನು ಜಮ್ಮು–ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ, ಹುರಿಯತ್ ಕಾನ್ಫರೆನ್ಸ್ನ ಹಿರಿಯ ನಾಯಕರೊಬ್ಬರೂ ಇದ್ದಾರೆ.</p>.<p><strong>ಓದಿ:</strong><a href="https://www.prajavani.net/world-news/uae-says-afghanistan-president-ashraf-ghani-is-in-the-country-858907.html" itemprop="url">ಆಫ್ಗಾನ್ನಿಂದ ಪಲಾಯನ ಮಾಡಿದ್ದ ಅಧ್ಯಕ್ಷ ಅಶ್ರಫ್ ಘನಿ ದುಬೈನಲ್ಲಿ ಪತ್ತೆ</a></p>.<p>ಮೊಹಮ್ಮದ್ ಅಕ್ಬರ್ ಭಟ್ ಅಲಿಯಾಸ್ ಜಾಫರ್ ಅಕ್ಬರ್ ಭಟ್, ಫಾತಿಮಾ ಶಾ, ಮೊಹಮ್ಮದ್ ಅಬ್ದುಲ್ಲಾ ಶಾ ಮತ್ತು ಸಬ್ಜಾರ್ ಅಹ್ಮದ್ ಶೇಖ್ ಬಂಧಿತರು. ಇವರನ್ನು ಜಮ್ಮು–ಕಾಶ್ಮೀರ ಪೊಲೀಸ್ ಸಿಐಡಿ ವಿಭಾಗದ ‘ಕೌಂಟರ್ ಇಂಟೆಲಿಜೆನ್ಸ್ (ಕಾಶ್ಮೀರ)’ ವಿಭಾಗವು ಬಂಧಿಸಿದೆ.</p>.<p>ಕೆಲವು ಮಂದಿ ಹುರಿಯತ್ ನಾಯಕರೂ ಸೇರಿದಂತೆ ಕೆಲವು ಅಪರಿಚಿತರು ಪಾಕಿಸ್ತಾನದ ಕಾಲೇಜುಗಳು, ವಿಶ್ವವಿದ್ಯಾಲಯಗಳ ಎಂಬಿಬಿಎಸ್ ಮತ್ತು ಇತರ ವೃತ್ತಿಪರ ಕೋರ್ಸ್ಗಳ ಸೀಟನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಮಾಹಿತಿಯ ಆಧಾರದಲ್ಲಿ ಕಳೆದ ವರ್ಷ ಜುಲೈನಲ್ಲೇ ಪ್ರಕರಣ ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಪ್ರಬಲ ಸಾಕ್ಷ್ಯಾಧಾರಗಳಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದೂ ಜಮ್ಮು–ಕಾಶ್ಮೀರ ಪೊಲೀಸ್ ಪ್ರಕಟಣೆ ತಿಳಿಸಿದೆ.</p>.<p><strong>ಓದಿ:</strong><a href="https://www.prajavani.net/world-news/escorted-by-taliban-indias-midnight-evacuation-from-afghanistan-858792.html" itemprop="url">ಸ್ವದೇಶಕ್ಕೆ ತೆರಳಲು ಭಾರತೀಯರಿಗೆ ತಾಲಿಬಾನ್ ಬೆಂಗಾವಲು!</a></p>.<p>‘ವಿದ್ಯಾರ್ಥಿಗಳ ಪೋಷಕರಿಂದ ಸಂಗ್ರಹಿಸಿದ ಹಣವನ್ನು ಭಾಗಶಃ, ಭಯೋತ್ಪಾದನೆ, ಪ್ರತ್ಯೇಕತಾವಾದವನ್ನು ಬೆಂಬಲಿಸಲು ಮತ್ತು ಆ ಚಟುವಟಿಕೆಗಳ ನಿಧಿಗಾಗಿ ವಿವಿಧ ರೀತಿಯಲ್ಲಿ ಬಳಸಲಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p>ಎಂಬಿಬಿಎಸ್ ಮತ್ತು ಇತರ ವೃತ್ತಿಪರ ಕೋರ್ಸ್ಗಳ ಸೀಟನ್ನು ಮಾರಾಟ ಮಾಡುವ ಸಂದರ್ಭದಲ್ಲಿ, ಕಾಶ್ಮೀರದಲ್ಲಿ ಹತ್ಯೆಗೀಡಾಗಿರುವ ಉಗ್ರರ ಕುಟುಂಬದವರು ಮತ್ತು ಅವರ ಆಪ್ತರಿಗೆ ಆದ್ಯತೆ ನೀಡಲಾಗಿತ್ತು ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>