ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಪಾಲಿಕೆ ಚುನಾವಣೆ | ಬಿಜೆಪಿಯಂತಹ ಭ್ರಷ್ಟ ಪಕ್ಷ ಜನರಿಗೆ ಬೇಕಾಗಿಲ್ಲ: ಎಎಪಿ

Last Updated 3 ಡಿಸೆಂಬರ್ 2022, 3:02 IST
ಅಕ್ಷರ ಗಾತ್ರ

ನವದೆಹಲಿ:ಆಮ್‌ ಆದ್ಮಿ ಪಕ್ಷವು (ಎಎಪಿ)ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಜನರು ಬಿಜೆಪಿಯಂತಹ ಭ್ರಷ್ಟ ಪಕ್ಷವು ಎಂಸಿಡಿಯಲ್ಲಿ ಅಧಿಕಾರಕ್ಕೇರುವುದನ್ನು ಬಯಸುವುದಿಲ್ಲ ಎಂದು ಹೇಳಿದೆ.

ಎಂಸಿಡಿಗೆಡಿಸೆಂಬರ್‌ 4 ರಂದು ಚುನಾವಣೆ ನಡೆಯಲಿದೆ. ಬಹಿರಂಗ ಪ್ರಚಾರಕ್ಕೆ (ಡಿ.2) ಶುಕ್ರವಾರ ತೆರೆ ಬಿದ್ದಿದೆ.

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಪಕ್ಷದ ಹಲವು ನಾಯಕರು ರಾಷ್ಟ್ರ ರಾಜಧಾನಿಯ 250 ವಾರ್ಡ್‌ಗಳಲ್ಲಿ ರೋಡ್‌ ಶೋ ನಡೆಸಿದ್ದಾರೆ. ಪಕ್ಷದ ಅಭ್ಯರ್ಥಿಗಳು 500 ಪ್ರದೇಶಗಳಲ್ಲಿ ಪಾದಯಾತ್ರೆ ಕೈಗೊಂಡಿದ್ದಾರೆ. ಪಕ್ಷವು 14,862 ಕಡೆ ಜನ ಸಂವಾದ ನಡೆಸಿದೆ. ಪ್ರತಿ ಮತದಾರರನ್ನೂ ತಲುಪಲು ಮನೆಮನೆಗೆ ತೆರಳಿ ಪ್ರಚಾರ ನಡೆಸಲಾಗಿದೆ ಎಂದುಎಎಪಿ ತಿಳಿಸಿದೆ.

ದೆಹಲಿಯ ಜನರಿಗೆ ಎಂಸಿಡಿಯಲ್ಲಿ ಬಿಜೆಪಿಯಂತಹ ಭ್ರಷ್ಟ ಪಕ್ಷ ಬೇಕಾಗಿಲ್ಲ. ಅವರಿಗೆ ಪ್ರಾಮಾಣಿಕವಾದ ಪಕ್ಷ ಬೇಕು. ಅದಕ್ಕಾಗಿಯೇ ಜನರು ಎಂಸಿಡಿಯಲ್ಲಿ ಕೇಜ್ರಿವಾಲ್ ಮಾದರಿಯನ್ನು ಒತ್ತಾಯಿಸುತ್ತಿದ್ದಾರೆ ಎಂದು ಎಎಪಿ ಹೇಳಿಕೆ ನೀಡಿದೆ.

ಘಾಜಿಪುರ, ಓಖ್ಲಾ ಮತ್ತು ಭಾಲ್‌ಸ್ವಾ ವ್ಯಾಪ್ತಿಯಲ್ಲಿ ಹೂಳು ತುಂಬು ಸ್ಥಳಗಳನ್ನು ಸ್ವಚ್ಛಗೊಳಿಸುವಲ್ಲಿಬಿಜೆಪಿಯು ತನ್ನ ಅಧಿಕಾರ ಅವಧಿಯಲ್ಲಿ ವಿಫಲವಾಗಿದೆ ಎಂದು ಪದೇಪದೆ ಟೀಕಿಸಿದೆ.

ಬಿಜೆಪಿ ಹಾಗೂ ಎಎಪಿ ಈ ಬಾರಿ ಎಂಸಿಡಿ ಚುನಾವಣೆಯಲ್ಲಿ ಜಯ ಸಾಧಿಸುವ ವಿಶ್ವಾಸದಲ್ಲಿವೆ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT