<p><strong>ನವದೆಹಲಿ</strong>: ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆ ಸಮೀಪಿಸುತ್ತಿರುವಂತೆಯೇ ಟಿಕೆಟ್ ಆಕಾಂಕ್ಷಿಗಳ ಬಂಡಾಯ ಜೋರಾಗಿದೆ. ಆದರೆ, ಬಿಜೆಪಿ ಇದಕ್ಕೆ ತಲೆಕೆಡಿಸಿಕೊಳ್ಳದೇ ಬಂಡಾಯ ಅಭ್ಯರ್ಥಿಗಳಿಗೆ ಬಿಸಿ ಮುಟ್ಟಿಸುವ ಪ್ರಕ್ರಿಯೆ ನಡೆಸಿದೆ.</p>.<p>ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ 11 ಬಂಡಾಯ ಅಭ್ಯರ್ಥಿಗಳನ್ನು 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಈ 11 ಜನ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳ ಎದುರು ಚುನಾವಣೆಗೆ ಸ್ಪರ್ಧಿಸಲು ಅಣಿಯಾಗಿದ್ದರು.</p>.<p>ಅಮಾನತುಗೊಂಡವರಲ್ಲಿ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧೆಗೆ ತಯಾರಿ ನಡೆಸಿದ್ದ ಹಿರಿಯ ನಾಯಕ ಗಜೇಂದ್ರ ದಾರಲ್ ಕೂಡ ಸೇರಿದ್ದಾರೆ. ಕೊನೆ ಕ್ಷಣದಲ್ಲಿ ಇವರ ಬದಲು ಅರುಣ್ ದಾರಲ್ ಅವರಿಗೆ ಟಿಕೆಟ್ ನೀಡಿದ್ದರಿಂದ ಅವರು ಬಂಡಾಯ ಎದ್ದಿದ್ದಾರೆ.</p>.<p>ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್ಗಳಿಗೆ ಡಿಸೆಂಬರ್ 4ರಂದು ಚುನಾವಣೆ ನಡೆಯಲಿದ್ದು, ಡಿ.7ರಂದು ಮತ ಎಣಿಕೆಯ ನಂತರ ಫಲಿತಾಂಶ ಪ್ರಕಟಗೊಳ್ಳಲಿದೆ.</p>.<p><a href="https://www.prajavani.net/district/bengaluru-city/cold-wave-conditions-prevail-in-bengaluru-temperature-dips-further-at-night-990664.html" itemprop="url">ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ: ರಾತ್ರಿ ವೇಳೆ ತಾಪಮಾನ ಮತ್ತಷ್ಟು ಇಳಿಕೆ </a></p>.<p><a href="https://www.prajavani.net/india-news/gujarat-assembly-elections-2022-pm-modi-rahul-to-campaign-in-gujarat-assembly-elections-990655.html" itemprop="url">ಗುಜರಾತ್ ವಿಧಾನಸಭೆ ಚುನಾವಣೆ: ಮೋದಿ, ರಾಹುಲ್ ಪ್ರಚಾರ: ರಂಗೇರಿದ ಕಣ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆ ಸಮೀಪಿಸುತ್ತಿರುವಂತೆಯೇ ಟಿಕೆಟ್ ಆಕಾಂಕ್ಷಿಗಳ ಬಂಡಾಯ ಜೋರಾಗಿದೆ. ಆದರೆ, ಬಿಜೆಪಿ ಇದಕ್ಕೆ ತಲೆಕೆಡಿಸಿಕೊಳ್ಳದೇ ಬಂಡಾಯ ಅಭ್ಯರ್ಥಿಗಳಿಗೆ ಬಿಸಿ ಮುಟ್ಟಿಸುವ ಪ್ರಕ್ರಿಯೆ ನಡೆಸಿದೆ.</p>.<p>ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ 11 ಬಂಡಾಯ ಅಭ್ಯರ್ಥಿಗಳನ್ನು 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಈ 11 ಜನ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳ ಎದುರು ಚುನಾವಣೆಗೆ ಸ್ಪರ್ಧಿಸಲು ಅಣಿಯಾಗಿದ್ದರು.</p>.<p>ಅಮಾನತುಗೊಂಡವರಲ್ಲಿ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧೆಗೆ ತಯಾರಿ ನಡೆಸಿದ್ದ ಹಿರಿಯ ನಾಯಕ ಗಜೇಂದ್ರ ದಾರಲ್ ಕೂಡ ಸೇರಿದ್ದಾರೆ. ಕೊನೆ ಕ್ಷಣದಲ್ಲಿ ಇವರ ಬದಲು ಅರುಣ್ ದಾರಲ್ ಅವರಿಗೆ ಟಿಕೆಟ್ ನೀಡಿದ್ದರಿಂದ ಅವರು ಬಂಡಾಯ ಎದ್ದಿದ್ದಾರೆ.</p>.<p>ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್ಗಳಿಗೆ ಡಿಸೆಂಬರ್ 4ರಂದು ಚುನಾವಣೆ ನಡೆಯಲಿದ್ದು, ಡಿ.7ರಂದು ಮತ ಎಣಿಕೆಯ ನಂತರ ಫಲಿತಾಂಶ ಪ್ರಕಟಗೊಳ್ಳಲಿದೆ.</p>.<p><a href="https://www.prajavani.net/district/bengaluru-city/cold-wave-conditions-prevail-in-bengaluru-temperature-dips-further-at-night-990664.html" itemprop="url">ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ: ರಾತ್ರಿ ವೇಳೆ ತಾಪಮಾನ ಮತ್ತಷ್ಟು ಇಳಿಕೆ </a></p>.<p><a href="https://www.prajavani.net/india-news/gujarat-assembly-elections-2022-pm-modi-rahul-to-campaign-in-gujarat-assembly-elections-990655.html" itemprop="url">ಗುಜರಾತ್ ವಿಧಾನಸಭೆ ಚುನಾವಣೆ: ಮೋದಿ, ರಾಹುಲ್ ಪ್ರಚಾರ: ರಂಗೇರಿದ ಕಣ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>