ಮಹಾನಗರ ಪಾಲಿಕೆ ಚುನಾವಣೆ ಕುರಿತು ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ‘ಇಂದಿನ ಚುನಾವಣೆ ದೆಹಲಿಯನ್ನು ಸ್ವಚ್ಛ, ಸುಂದರವಾಗಿಸಲು ಹಾಗೂ ನಾಗರಿಕ ಆಡಳಿತವನ್ನು ಭ್ರಷ್ಟಾಚಾರ ಮುಕ್ತಗೊಳಿಸಲು ಬಹುಮುಖ್ಯವಾಗಿದೆ. ಪ್ರಾಮಾಣಿಕ ಆಡಳಿತ ವ್ಯವಸ್ಥೆಯನ್ನು ಆಯ್ಕೆ ಮಾಡಲು ಇಂದು ತಮ್ಮ ಮತವನ್ನು ಚಲಾಯಿಸುವಂತೆ ನಾನು ಎಲ್ಲಾ ದೆಹಲಿ ನಿವಾಸಿಗಳಿಗೆ ಮನವಿ ಮಾಡುತ್ತೇನೆ’ ಎಂದಿದ್ದಾರೆ.