ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಇಂದಿನ ಆರ್ಥಿಕ ಕ್ರಮಗಳಲ್ಲಿ ನಮ್ಮ ರೈತರಿಗೆ ನೆರವು ನೀಡಲಾಗಿದೆ. ಇದರಿಂದ ರೈತರ ಉತ್ಪಾದನಾ ವೆಚ್ಚ ಕಡಿಮೆಯಾಗಿ ಆದಾಯ ವೃದ್ಧಿಯಾಗುತ್ತದೆ. ಕೃಷಿ ಚಟುವಟಿಕೆಗಳ ಸ್ಥಿತಿಸ್ಥಾಪಕತ್ವ ಮತ್ತು ಸುಸ್ಥಿರತೆಯನ್ನು ಬೆಂಬಲಿಸುವ ಅನೇಕ ಉಪಕ್ರಮಗಳನ್ನು ಘೋಷಿಸಲಾಗಿದೆ,‘ ಎಂದು ಅವರು ಹೇಳಿದ್ದಾರೆ.