‘ಸ್ಮಶಾನ, ಚಿತಾಗಾರಗಳು ರಾಜ್ಯಗಳಿಗೆ ಸಂಬಂಧಿಸಿದ ವಿಚಾರಗಳು. ಆದರೆ ಮೃತಪಟ್ಟವರಿಗೆ ಗೌರವಯುತ ಅಂತ್ಯ ಸಂಸ್ಕಾರ ಸಿಗುತ್ತಿಲ್ಲ. ಹೆಚ್ಚಿನ ಸಂಖ್ಯೆಯ ಚಿತಾಗಾರಗಳು ಕೆಲಸ ಮಾಡುತ್ತಿಲ್ಲ ಎಂಬುದು ದುರ್ದೈವದ ಸಂಗತಿ. ಅಂತ್ಯಸಂಸ್ಕಾರದ ವಿಧಿ ವಿಧಾನಗಳು ವೆಚ್ಚದಾಯಕ ಎಂಬ ಕಾರಣಕ್ಕೆ ಬಡ ಜನರಿಗೆ ಮೃತದೇಹಗಳನ್ನು ವಿಲೇವಾರಿ ಮಾಡಲೂ ಸಾಧ್ಯವಾಗುತ್ತಿಲ್ಲ’ ಎಂದು ಅರೋರಾ ಹೇಳಿದರು.