ಸಮಿತಿ ಸದಸ್ಯರಾಗಿರುವ ಲೋಕಸಭೆಯಲ್ಲಿನ ಕಾಂಗ್ರೆಸ್ ಪಕ್ಷದ ಮುಖಂಡ ಅಧೀರ್ ರಂಜನ್ ಚೌಧರಿ ಅವರನ್ನು ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯದ ಕಾರ್ಯದರ್ಶಿ ಸಂಪರ್ಕಿಸಿದ್ದಾರೆ. ಮೇ 2ರವರೆಗೂ ನಾನು ಲಭ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ ಎಂದು ಕೇಂದ್ರ ತನ್ನ ಪ್ರಮಾಣಪತ್ರದಲ್ಲಿ ಮಾಹಿತಿ ನೀಡಿದೆ.