ವಿವಾದಿತ ಕೃಷಿಕಾಯ್ದೆಗಳನ್ನು ಹಿಂತೆಗೆದುಕೊಳ್ಳುವ ಕಾರ್ಯವಿಧಾನ, ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕವಾಗಿ ಖಾತರಿಗೊಳಿಸುವುದು ಹಾಗೂ ಈ ಹಿಂದೆ ಪ್ರಸ್ತಾಪಿಸಲಾದ ಎರಡು ವಿಚಾರಗಳು ಕಡ್ಡಾಯವಾಗಿ ಮಾತುಕತೆಯ ಭಾಗವಾಗಿರಬೇಕು’ ಎಂದು 40 ರೈತ ಸಂಘಟನೆಗಳನ್ನು ಪ್ರತಿನಿಧಿಸುವ ‘ಸಂಯುಕ್ತ ಕಿಸಾನ್ ಮೋರ್ಚಾ’ ಸರ್ಕಾರಕ್ಕೆ ಮಂಗಳವಾರವೇ ಪತ್ರ ಬರೆದಿತ್ತು. ಇದರ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.