ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದ ನಂತರ, ಮೈತ್ರಿ ಸರ್ಕಾರದ ಅಂಗ ಪಕ್ಷಗಳಾದ ಶಿವಸೇನಾ ಹಾಗೂ ಎನ್ಸಿಪಿ ನಡುವೆ ಬಿರುಕು ಮೂಡುವ ಲಕ್ಷಣಗಳು ಗೋಚರಿಸುತ್ತಿವೆ. ಈ ನಡುವೆಯೇ, ಪವಾರ್ ಅವರು ಗೃಹ ಸಚಿವ ಶಾ ಅವರನ್ನು ಶನಿವಾರ ಭೇಟಿಯಾಗಿದ್ದಾರೆ ಎಂಬ ವಿಷಯ ಕುತೂಹಲಕ್ಕೂ ಕಾರಣವಾಗಿದೆ.