ನವದೆಹಲಿ, ಮುಂಬೈ: ಶ್ರದ್ಧಾ ಹತ್ಯೆಯ ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾಗೆ ಐದು ದಿನಗಳೊಳಗೆ ಮಂಪರು ಪರೀಕ್ಷೆ ನಡೆಸುವಂತೆ ದೆಹಲಿ ಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಆಫ್ತಾಬ್ ಕೆಲಸ ಮಾಡುತ್ತಿದ್ದ ಗುರುಗ್ರಾಮದ ಕಚೇರಿಗೆ ಶುಕ್ರವಾರ ಪರಿಶೀಲನೆ ನಡೆಸಿದರು. ಕಚೇರಿ ಸಮೀಪದ ಪೊದೆಯಲ್ಲಿ ಪತ್ತೆಯಾದ ಮನುಷ್ಯನ ದೇಹದ ಕೆಲ ಭಾಗಗಳನ್ನು ಪೊಲೀಸರು ಸಂಗ್ರಹಿಸಿದರು.