ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಯೋಜನೆ ತಡೆಗೆ ಬದ್ಧ: ತಮಿಳುನಾಡು

Last Updated 6 ಏಪ್ರಿಲ್ 2022, 19:38 IST
ಅಕ್ಷರ ಗಾತ್ರ

ಚೆನ್ನೈ: ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕ ಮುಂದಾದರೆ ಅದು ಕಾವೇರಿ ನದಿ ನೀರು ನ್ಯಾಯ ಮಂಡಳಿ ಮತ್ತು ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದ ಉಲ್ಲಂಘನೆ ಆಗಲಿದೆ ಎಂದು ತಮಿಳುನಾಡು ಬುಧವಾರ ಹೇಳಿದೆ.

ಕರ್ನಾಟಕವುಈ ಯೋಜನೆಯನ್ನು ಕಾರ್ಯರೂಪಕ್ಕೆ ತರದಂತೆ ತಡೆಯಲು ಅಗತ್ಯ ಕ್ರಮಗಳನ್ನು ತಮಿಳುನಾಡು ಸರ್ಕಾರವು ತೆಗೆದುಕೊಳ್ಳುತ್ತಿದೆ ಎಂದು ಅದು ಪುನರುಚ್ಚರಿಸಿದೆ.

ಈ ಕುರಿತು ಸದನದಲ್ಲಿ ಮಾತನಾಡಿದರಾಜ್ಯ ಜಲ ಸಂಪನ್ಮೂಲ ಸಚಿವ ದೊರೆ ಮುರುಗನ್‌, ಅಂತರರಾಜ್ಯ ನದಿ ನೀರು ವಿವಾದದಲ್ಲಿ ತಮಿಳುನಾಡಿನ ಹಕ್ಕುಗಳಿಗಾಗಿ ಡಿಎಂಕೆ ಸರ್ಕಾರ ಹೋರಾಡಲಿದೆ. ಅಣೆಕಟ್ಟು ನಿರ್ಮಾಣ ತಡೆಯಲು ಸರ್ಕಾರ ಬದ್ಧವಾಗಿದೆ ಎಂದು ರಾಜ್ಯದ ಜನರಿಗೆ ಆಶ್ವಾಸನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT