ಚೆನ್ನೈ: ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕ ಮುಂದಾದರೆ ಅದು ಕಾವೇರಿ ನದಿ ನೀರು ನ್ಯಾಯ ಮಂಡಳಿ ಮತ್ತು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಉಲ್ಲಂಘನೆ ಆಗಲಿದೆ ಎಂದು ತಮಿಳುನಾಡು ಬುಧವಾರ ಹೇಳಿದೆ.
ಕರ್ನಾಟಕವುಈ ಯೋಜನೆಯನ್ನು ಕಾರ್ಯರೂಪಕ್ಕೆ ತರದಂತೆ ತಡೆಯಲು ಅಗತ್ಯ ಕ್ರಮಗಳನ್ನು ತಮಿಳುನಾಡು ಸರ್ಕಾರವು ತೆಗೆದುಕೊಳ್ಳುತ್ತಿದೆ ಎಂದು ಅದು ಪುನರುಚ್ಚರಿಸಿದೆ.
ಈ ಕುರಿತು ಸದನದಲ್ಲಿ ಮಾತನಾಡಿದರಾಜ್ಯ ಜಲ ಸಂಪನ್ಮೂಲ ಸಚಿವ ದೊರೆ ಮುರುಗನ್, ಅಂತರರಾಜ್ಯ ನದಿ ನೀರು ವಿವಾದದಲ್ಲಿ ತಮಿಳುನಾಡಿನ ಹಕ್ಕುಗಳಿಗಾಗಿ ಡಿಎಂಕೆ ಸರ್ಕಾರ ಹೋರಾಡಲಿದೆ. ಅಣೆಕಟ್ಟು ನಿರ್ಮಾಣ ತಡೆಯಲು ಸರ್ಕಾರ ಬದ್ಧವಾಗಿದೆ ಎಂದು ರಾಜ್ಯದ ಜನರಿಗೆ ಆಶ್ವಾಸನೆ ನೀಡಿದ್ದಾರೆ.