ಸ್ಟಾಲಿನ್ ಅವರು ತಮ್ಮ ಸಂಪುಟಕ್ಕೆ, ಅನುಭವಿಗಳು ಮತ್ತು ಹೊಸಬರನ್ನೂ ಆಯ್ಕೆ ಮಾಡಿಕೊಂಡಿದ್ದಾರೆ. ಅನುಭವಿಗಳಲ್ಲಿ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರಿಗೆ ಜಲಸಂಪನ್ಮೂಲ, ಕೆ.ಎನ್.ನೆಹರೂ ಅವರಿಗೆ ನಗರಾಡಳಿತ, ಐ. ಪೆರಿಯಾಸ್ವಾಮಿ ಅವರಿಗೆ ಸಹಕಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಹೊಸಬರಿಗೂ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ಮಾಜಿ ಬ್ಯಾಂಕರ್ ಪಿಟಿಆರ್ಪಿ ತ್ಯಾಗರಾಜನ್ ಅವರಿಗೆ ಹಣಕಾಸು, ಚೆನ್ನೈನ ಮಾಜಿ ಮೇಯರ್ ಮಾ ಸುಬ್ರಮಣಿಯನ್ ಅವರಿಗೆ ಆರೋಗ್ಯ, ಸ್ಟಾಲಿನ್ ಅವರ ಮಗ ಉದಯನಿಧಿ ಸ್ಟಾಲಿನ್ ಅವರ ಆಪ್ತ ಅನ್ಬಿಲ್ ಮಹೇಶ್ ಅವರಿಗೆ ಶಾಲಾ ಶಿಕ್ಷಣ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.