ವಿರೋಧ ಪಕ್ಷದ ನಾಯಕರೂ ಆಗಿರುವ ಬಿಜೆಪಿಯ ಪರ್ವೀನ್ ದಾರೇಕರ್ ಅವರು, ‘ಸಕ್ಪಾಲ್ ಅವರು ಮುಸ್ಲಿಮರನ್ನು ಓಲೈಸುವ ಪ್ರಯತ್ನದಲ್ಲಿ ಬಾಳಾಸಾಹೇಬ್ ಠಾಕ್ರೆಯವರ ಸಿದ್ಧಾಂತವನ್ನು ಬಿಟ್ಟುಕೊಟ್ಟಿದ್ದಾರೆ. ಬಾಳಾಸಾಹೇಬರು ಮಸೀದಿಗಳಲ್ಲಿ ನಮಾಜ್ ಕೂಗುವ ಸಲುವಾಗಿ ಧ್ವನಿವರ್ದಕಗಳನ್ನು ಬಳಸುವುದನ್ನು ವಿರೋಧಿಸುತ್ತಿದ್ದರು. ಇಂದು ಪಕ್ಷವು ವೋಟ್ ಬ್ಯಾಂಕ್ ಸಲುವಾಗಿ ಹಿಂದುತ್ವದ ವಿಚಾರದಲ್ಲಿ ಗೊಂದಲಕ್ಕೀಡಾಗಿದೆ. ಸರ್ಕಾರವನ್ನು ಉಳಿಸಿಕೊಳ್ಳುವುದಕ್ಕಾಗಿಪಕ್ಷದ ಮೂಲಭೂತ ಸಿದ್ಧಾಂತಗಳೊಂದಿಗೆ ರಾಜಿ ಮಾಡಿಕೊಳ್ಳುತ್ತಿರುವ ಸಕ್ಪಾಲ್ ಅವರು, ಸೇನೆಯ ನಾಯಕ ಸಂಜಯ್ ರಾವುತ್ ಅವರ ಆಪ್ತ ಎನ್ನಲಾಗಿದೆ’ ಎಂದು ಎಂದಿದ್ದಾರೆ.