ದೇಶದಲ್ಲಿ 2018ರಲ್ಲಿ ‘ಮೀಟೂ’ ಅಭಿಯಾನ ಆರಂಭವಾಗಿದ್ದ ಸಂದರ್ಭದಲ್ಲಿ ಅಕ್ಬರ್ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ರಮಣಿ ಅವರು ಮಾಡಿದ್ದರು. ಈ ಆರೋಪಕ್ಕೆ ಪ್ರತಿಯಾಗಿ ರಮಣಿ ಅವರ ವಿರುದ್ಧ 2018 ಅ.15ರಂದು ಮಾನನಷ್ಟ ಮೊಕದ್ದಮೆಯನ್ನು ಅಕ್ಬರ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಅವರು, ವ್ಯಾಜ್ಯ ಅಂತ್ಯಗೊಳಿಸಲು ಸಾಧ್ಯತೆ ಇದೆಯೇ ಎಂದು ಪ್ರಶ್ನಿಸಿದರು.