‘ಮಹಾಭಾರತ ಮತ್ತು ರಾಮಾಯಣದಂತಹ ಮಹಾ ಪುರಾಣ ಕಾವ್ಯಗಳನ್ನು ಗೌರವಿಸುವ ದೇಶದಲ್ಲಿ ಮಹಿಳೆಯರ ವಿರುದ್ಧ ಅಪರಾಧಗಳು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಸಾಮಾಜಿಕ ಸ್ಥಾನಮಾನ ಹೊಂದಿದ ವ್ಯಕ್ತಿ ಕೂಡ ಲೈಂಗಿಕ ಕಿರುಕುಳ ನೀಡಬಹುದು ಎನ್ನುವುದನ್ನು ಗಮನಿಸಿದರೆ, ಕಿರುಕುಳಕ್ಕೆ ಒಳಗಾದ ಮಹಿಳೆ ದಶಕಗಳ ನಂತರವೂ ತನ್ನ ಆಯ್ಕೆಯ ಯಾವುದೇ ವೇದಿಕೆಯ ಮುಂದೆ ತನ್ನ ಕುಂದುಕೊರತೆಗಳನ್ನು ಹೇಳಿಕೊಳ್ಳುವ ಹಕ್ಕು ಹೊಂದಿದ್ದಾಳೆ’ ಎಂದು ನ್ಯಾಯಮೂರ್ತಿಗಳು ಇದೇ ಸಂದರ್ಭ ಹೇಳಿದರು.