<p><strong>ನವದೆಹಲಿ</strong>: ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮೆಟ್ರೊ ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ನೀಡಿದೆ. ಸೆ.7ರಿಂದ ಬೆಂಗಳೂರು ನಗರ ಸೇರಿದಂತೆ ದೇಶದ ವಿವಿಧ ಮಹಾನಗರಗಳಲ್ಲಿ ಮೆಟ್ರೊ ರೈಲುಗಳ ಸಾರ್ವಜನಿಕ ಸೇವೆ ಆರಂಭವಾಗಲಿದೆ ಎಂದು ಸರ್ಕಾರ ತಿಳಿಸಿದೆ.</p>.<p>ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು 'ಕೆಲವು ನಿಬಂಧನೆಗಳ ಜೊತೆಗೆ, ವಿವಿಧ ಹಂತಗಳಲ್ಲಿ ಮೆಟ್ರೊ ರೈಲು ಸಂಚಾರ ಸೇವೆಗಳು ಆರಂಭವಾಗಲಿದೆ. ಮೊದಲಿಗೆ ಕೆಲವೇ ಮಾರ್ಗಗಳಲ್ಲಿ ರೈಲುಗಳು ಕಾರ್ಯನಿರ್ವಹಿಸಲಿವೆ' ಎಂದು ತಿಳಿಸಿದ್ದಾರೆ.</p>.<p>ಪ್ರಯಾಣಿಕರು ಮಾಸ್ಕ್ಗಳನ್ನು ಧರಿಸುವುದು ಕಡ್ಡಾಯವಾಗಿದ್ದು, ಆರೋಗ್ಯ ಸೇತು ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವುದು ಜನರ ಆಯ್ಕೆಗೆ ಬಿಟ್ಟಿದ್ದು ಎಂದು ಸಚಿವ ಪುರಿ ಹೇಳಿದ್ದಾರೆ.</p>.<p><strong>ಮೆಟ್ರೊ ಪುನರಾರಂಭಕ್ಕೆ ಕೇಂದ್ರ ನೀಡಿರುವ ಮಾರ್ಗಸೂಚಿಯಲ್ಲಿ ಏನಿದೆ?</strong></p>.<p>* ಕಂಟೈನ್ಮೆಂಟ್ ವಲಯಗಳಲ್ಲಿನ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಸಂಪೂರ್ಣವಾಗಿ ಮುಚ್ಚಬೇಕು</p>.<p>* ದೈಹಿಕ ಅಂತರ ಖಚಿತಪಡಿಸಿಕೊಳ್ಳಲು, ನಿಲ್ದಾಣಗಳಲ್ಲಿ ಮತ್ತು ರೈಲುಗಳ ಒಳಗೆ ಸೂಕ್ತವಾದ ಸಾಂಕೇತಿಕ ಗುರುತುಗಳನ್ನು ಮಾಡಬೇಕು</p>.<p>* ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಫೇಸ್ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಬೇಕು. ಮಾಸ್ಕ್ ಇಲ್ಲದೇ ಬರುವ ವ್ಯಕ್ತಿಗಳ ಬಳಿ ಹಣ ಪಾವತಿಸಿಕೊಂಡು ಮಾಸ್ಕ್ ಪೂರೈಸುವ ವ್ಯವಸ್ಥೆಯನ್ನು ಮೆಟ್ರೊ ರೈಲು ನಿಗಮಗಳು ಮಾಡಬಹುದು.</p>.<p>* ನಿಲ್ದಾಣಗಳಿಗೆ ಪ್ರವೇಶಿಸುವ ವ್ಯಕ್ತಿಗಳ ಉಷ್ಣ ತಪಾಸಣೆ ನಡೆಸಬೇಕು. ರೋಗಲಕ್ಷಣವಿಲ್ಲದ ವ್ಯಕ್ತಿಗಳಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಬೇಕು. ರೋಗಲಕ್ಷಣವಿರುವ ವ್ಯಕ್ತಿಗಳಿಗೆ ಪರೀಕ್ಷೆ ಅಥವಾ ವೈದ್ಯಕೀಯ ತಪಾಸನೆಗಾಗಿ ಹತ್ತಿರದ ಆರೈಕೆ ಕೇಂದ್ರ / ಆಸ್ಪತ್ರೆಗೆ ಹೋಗಲು ಸೂಚಿಸಬೇಕು. ಆರೋಗ್ಯ ಸೇತು ಅಪ್ಲಿಕೇಶನ್ ಬಳಕೆಯನ್ನು ಪ್ರೋತ್ಸಾಹಿಸಬೇಕು.</p>.<p>* ನಿಲ್ದಾಣಗಳಿಗೆ ಪ್ರವೇಶಿಸುವಾಗ ಪ್ರಯಾಣಿಕರಿಗೆ ಸ್ಯಾನಿಟೈಸರ್ ಒದಗಿಸಬೇಕು. ಮೆಟ್ರೊ ರೈಲು ಮತ್ತು ನಿಲ್ದಾಣಗಳಲ್ಲಿನ ಉಪಕರಣಗಳು, ಲಿಫ್ಟ್, ಎಸ್ಕಲೇಟರ್ಗಳು ಮತ್ತು ಶೌಚಾಲಯಗಳನ್ನು ನಿಯಮಿತವಾಗಿ ಸ್ಯಾನಿಟೈಸ್ ಮಾಡಬೇಕು.</p>.<p>* ಸ್ಮಾರ್ಟ್ ಕಾರ್ಡ್ ಬಳಕೆ ಮತ್ತು ನಗದು ರಹಿತ ಆನ್ಲೈನ್ ವಹಿವಾಟುಗಳನ್ನು ಪ್ರೋತ್ಸಾಹಿಸಬೇಕು. ಸರಿಯಾಗಿ ಶುಚಿಗೊಳಿಸಿದ ಟೋಕನ್ಗಳು ಮತ್ತು ಚೀಟಿಗಳನ್ನು ಬಳಸಬೇಕು.</p>.<p>* ಜನದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಲ ನಿಲ್ದಾಣಗಳಲ್ಲಿ ರೈಲು ನಿಲುಗಡೆಯನ್ನು ತಪ್ಪಿಸುವ ನಿರ್ಧಾರಗಳನ್ನು ಮೆಟ್ರೊ ರೈಲು ನಿಗಮಗಳು ಕೈಗೊಳ್ಳಬಹುದು.</p>.<p>* ಮಾಧ್ಯಮ, ಸಾಮಾಜಿಕ ಜಾಲತಾಣ, ಪೋಸ್ಟರ್, ಬ್ಯಾನರ್, ಹೋರ್ಡಿಂಗ್, ವೆಬ್ಸೈಟ್ ಇತ್ಯಾದಿಗಳ ಮೂಲಕ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಮಾಹಿತಿ ಮತ್ತು ಸಂವಹನ ಅಭಿಯಾನವನ್ನು ಪ್ರಾರಂಭಿಸಬೇಕು.</p>.<p>* ನಿಲ್ದಾಣದ ಹೊರಗಿನ ಜನಸಂದಣಿ ನಿಯಂತ್ರಿಸಲು ಮತ್ತು ತುರ್ತು ಪರಿಸ್ಥಿತಿ ಎದುರಿಸಲು ರಾಜ್ಯ ಪೊಲೀಸ್ ಮತ್ತು ಸ್ಥಳೀಯ ಆಡಳಿತದೊಂದಿಗೆ ಮೆಟ್ರೋ ರೈಲು ನಿಗಮಗಳು ನಿಕಟ ಸಂಪರ್ಕ ಹೊಂದಿರಬೇಕು. </p>.<p>* ಮೆಟ್ರೊ ಸಂಚಾರವನ್ನು ಶ್ರೇಣೀಕೃತ ರೀತಿಯಲ್ಲಿ ಪುನರಾರಂಭಿಸಬೇಕು. ಒಂದಕ್ಕಿಂತ ಹೆಚ್ಚು ಮಾರ್ಗಗಳನ್ನು ಹೊಂದಿರುವ ಮೆಟ್ರೊಗಳು ಸೆಪ್ಟೆಂಬರ್ 7, 2020ರಿಂದ ಸಂಚರಿಸಬೇಕು. ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಮಾರ್ಗಗಳಲ್ಲಿ ಸೆಪ್ಟೆಂಬರ್ 12, 2020ರೊಳಗೆ ರೈಲುಗಳು ಕಾರ್ಯ ನಿರ್ವಹಿಸಬೇಕು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮೆಟ್ರೊ ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ನೀಡಿದೆ. ಸೆ.7ರಿಂದ ಬೆಂಗಳೂರು ನಗರ ಸೇರಿದಂತೆ ದೇಶದ ವಿವಿಧ ಮಹಾನಗರಗಳಲ್ಲಿ ಮೆಟ್ರೊ ರೈಲುಗಳ ಸಾರ್ವಜನಿಕ ಸೇವೆ ಆರಂಭವಾಗಲಿದೆ ಎಂದು ಸರ್ಕಾರ ತಿಳಿಸಿದೆ.</p>.<p>ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು 'ಕೆಲವು ನಿಬಂಧನೆಗಳ ಜೊತೆಗೆ, ವಿವಿಧ ಹಂತಗಳಲ್ಲಿ ಮೆಟ್ರೊ ರೈಲು ಸಂಚಾರ ಸೇವೆಗಳು ಆರಂಭವಾಗಲಿದೆ. ಮೊದಲಿಗೆ ಕೆಲವೇ ಮಾರ್ಗಗಳಲ್ಲಿ ರೈಲುಗಳು ಕಾರ್ಯನಿರ್ವಹಿಸಲಿವೆ' ಎಂದು ತಿಳಿಸಿದ್ದಾರೆ.</p>.<p>ಪ್ರಯಾಣಿಕರು ಮಾಸ್ಕ್ಗಳನ್ನು ಧರಿಸುವುದು ಕಡ್ಡಾಯವಾಗಿದ್ದು, ಆರೋಗ್ಯ ಸೇತು ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವುದು ಜನರ ಆಯ್ಕೆಗೆ ಬಿಟ್ಟಿದ್ದು ಎಂದು ಸಚಿವ ಪುರಿ ಹೇಳಿದ್ದಾರೆ.</p>.<p><strong>ಮೆಟ್ರೊ ಪುನರಾರಂಭಕ್ಕೆ ಕೇಂದ್ರ ನೀಡಿರುವ ಮಾರ್ಗಸೂಚಿಯಲ್ಲಿ ಏನಿದೆ?</strong></p>.<p>* ಕಂಟೈನ್ಮೆಂಟ್ ವಲಯಗಳಲ್ಲಿನ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಸಂಪೂರ್ಣವಾಗಿ ಮುಚ್ಚಬೇಕು</p>.<p>* ದೈಹಿಕ ಅಂತರ ಖಚಿತಪಡಿಸಿಕೊಳ್ಳಲು, ನಿಲ್ದಾಣಗಳಲ್ಲಿ ಮತ್ತು ರೈಲುಗಳ ಒಳಗೆ ಸೂಕ್ತವಾದ ಸಾಂಕೇತಿಕ ಗುರುತುಗಳನ್ನು ಮಾಡಬೇಕು</p>.<p>* ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಫೇಸ್ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಬೇಕು. ಮಾಸ್ಕ್ ಇಲ್ಲದೇ ಬರುವ ವ್ಯಕ್ತಿಗಳ ಬಳಿ ಹಣ ಪಾವತಿಸಿಕೊಂಡು ಮಾಸ್ಕ್ ಪೂರೈಸುವ ವ್ಯವಸ್ಥೆಯನ್ನು ಮೆಟ್ರೊ ರೈಲು ನಿಗಮಗಳು ಮಾಡಬಹುದು.</p>.<p>* ನಿಲ್ದಾಣಗಳಿಗೆ ಪ್ರವೇಶಿಸುವ ವ್ಯಕ್ತಿಗಳ ಉಷ್ಣ ತಪಾಸಣೆ ನಡೆಸಬೇಕು. ರೋಗಲಕ್ಷಣವಿಲ್ಲದ ವ್ಯಕ್ತಿಗಳಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಬೇಕು. ರೋಗಲಕ್ಷಣವಿರುವ ವ್ಯಕ್ತಿಗಳಿಗೆ ಪರೀಕ್ಷೆ ಅಥವಾ ವೈದ್ಯಕೀಯ ತಪಾಸನೆಗಾಗಿ ಹತ್ತಿರದ ಆರೈಕೆ ಕೇಂದ್ರ / ಆಸ್ಪತ್ರೆಗೆ ಹೋಗಲು ಸೂಚಿಸಬೇಕು. ಆರೋಗ್ಯ ಸೇತು ಅಪ್ಲಿಕೇಶನ್ ಬಳಕೆಯನ್ನು ಪ್ರೋತ್ಸಾಹಿಸಬೇಕು.</p>.<p>* ನಿಲ್ದಾಣಗಳಿಗೆ ಪ್ರವೇಶಿಸುವಾಗ ಪ್ರಯಾಣಿಕರಿಗೆ ಸ್ಯಾನಿಟೈಸರ್ ಒದಗಿಸಬೇಕು. ಮೆಟ್ರೊ ರೈಲು ಮತ್ತು ನಿಲ್ದಾಣಗಳಲ್ಲಿನ ಉಪಕರಣಗಳು, ಲಿಫ್ಟ್, ಎಸ್ಕಲೇಟರ್ಗಳು ಮತ್ತು ಶೌಚಾಲಯಗಳನ್ನು ನಿಯಮಿತವಾಗಿ ಸ್ಯಾನಿಟೈಸ್ ಮಾಡಬೇಕು.</p>.<p>* ಸ್ಮಾರ್ಟ್ ಕಾರ್ಡ್ ಬಳಕೆ ಮತ್ತು ನಗದು ರಹಿತ ಆನ್ಲೈನ್ ವಹಿವಾಟುಗಳನ್ನು ಪ್ರೋತ್ಸಾಹಿಸಬೇಕು. ಸರಿಯಾಗಿ ಶುಚಿಗೊಳಿಸಿದ ಟೋಕನ್ಗಳು ಮತ್ತು ಚೀಟಿಗಳನ್ನು ಬಳಸಬೇಕು.</p>.<p>* ಜನದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಲ ನಿಲ್ದಾಣಗಳಲ್ಲಿ ರೈಲು ನಿಲುಗಡೆಯನ್ನು ತಪ್ಪಿಸುವ ನಿರ್ಧಾರಗಳನ್ನು ಮೆಟ್ರೊ ರೈಲು ನಿಗಮಗಳು ಕೈಗೊಳ್ಳಬಹುದು.</p>.<p>* ಮಾಧ್ಯಮ, ಸಾಮಾಜಿಕ ಜಾಲತಾಣ, ಪೋಸ್ಟರ್, ಬ್ಯಾನರ್, ಹೋರ್ಡಿಂಗ್, ವೆಬ್ಸೈಟ್ ಇತ್ಯಾದಿಗಳ ಮೂಲಕ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಮಾಹಿತಿ ಮತ್ತು ಸಂವಹನ ಅಭಿಯಾನವನ್ನು ಪ್ರಾರಂಭಿಸಬೇಕು.</p>.<p>* ನಿಲ್ದಾಣದ ಹೊರಗಿನ ಜನಸಂದಣಿ ನಿಯಂತ್ರಿಸಲು ಮತ್ತು ತುರ್ತು ಪರಿಸ್ಥಿತಿ ಎದುರಿಸಲು ರಾಜ್ಯ ಪೊಲೀಸ್ ಮತ್ತು ಸ್ಥಳೀಯ ಆಡಳಿತದೊಂದಿಗೆ ಮೆಟ್ರೋ ರೈಲು ನಿಗಮಗಳು ನಿಕಟ ಸಂಪರ್ಕ ಹೊಂದಿರಬೇಕು. </p>.<p>* ಮೆಟ್ರೊ ಸಂಚಾರವನ್ನು ಶ್ರೇಣೀಕೃತ ರೀತಿಯಲ್ಲಿ ಪುನರಾರಂಭಿಸಬೇಕು. ಒಂದಕ್ಕಿಂತ ಹೆಚ್ಚು ಮಾರ್ಗಗಳನ್ನು ಹೊಂದಿರುವ ಮೆಟ್ರೊಗಳು ಸೆಪ್ಟೆಂಬರ್ 7, 2020ರಿಂದ ಸಂಚರಿಸಬೇಕು. ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಮಾರ್ಗಗಳಲ್ಲಿ ಸೆಪ್ಟೆಂಬರ್ 12, 2020ರೊಳಗೆ ರೈಲುಗಳು ಕಾರ್ಯ ನಿರ್ವಹಿಸಬೇಕು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>