ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದ ತಂಡ, ಈಗಾಗಲೇ ಪಶ್ಚಿಮ ಬಂಗಾಳಕ್ಕೆ ತೆರಳಿದೆ. ಫಲಿತಾಂಶದ ನಂತರ ನಡೆದಿರುವ ಹಿಂಸಾಚಾರದ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸಲು ತಂಡಕ್ಕೆ ಸೂಚಿಸಲಾಗಿದೆ. ಇಂಥ ಘಟನೆಗಳು ನಡೆಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಸಚಿವಾಲಯ ಬುಧವಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಪತ್ರ ಬರೆದಿದ್ದು ಕ್ರಮ ಕೈಗೊಳ್ಳುವಲ್ಲಿ ರಾಜ್ಯವು ವಿಫಲವಾದರೆ ಈ ವಿಷಯವನ್ನು ‘ಗಂಭೀರವಾಗಿ‘ ಪರಿಗಣಿಸಲಾಗುವುದು ಎಂದು ಸಚಿವಾಲಯ ಎಚ್ಚರಿಸಿದೆ.