ದೆಹಲಿಯ ಲೆಫ್ಟಿನಂಟ್ ಗವರ್ನರ್ ರಚಿಸಿದ್ದ ತ್ರಿಸದಸ್ಯರ ಸಮಿತಿಯು, ಖರೀದಿ ಪ್ರಕ್ರಿಯೆಯಲ್ಲಿ ಲೋಪವಾಗಿದೆ ಎಂದು ಗುರುತಿಸಿದ್ದು, ಖರೀದಿ ಒಪ್ಪಂದವನ್ನು ರದ್ದುಪಡಿಸಬೇಕು ಎಂದು ಶಿಫಾರಸು ಮಾಡಿತ್ತು. ಈ ವಿಷಯವನ್ನು ಪರಿಶೀಲಿಸಬೇಕು ಎಂದು ನಂತರ ಲೆಫ್ಟಿನಂಟ್ ಗವರ್ನರ್ ಅವರು, ಕೇಂದ್ರ ಗೃಹ ಸಚಿವಾಲಯಕ್ಕೆ ಒಪ್ಪಿಸಿದ್ದರು.