<p><strong>ನವದೆಹಲಿ</strong>: ಏರ್ ಇಂಡಿಯಾ ವಿಮಾನದ ಬ್ಯುಸಿನೆಸ್ ಕ್ಲಾಸ್ನಲ್ಲಿ ಪ್ರಯಾಣಿಸುತ್ತಿದ್ದ ಹಿರಿಯ ಮಹಿಳೆ ಮೇಲೆ ಮದ್ಯದ ಅಮಲಿನಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣದ ಆರೋಪಿ ಶಂಕರ್ ಮಿಶ್ರಾಗೆ ಇಲ್ಲಿನ ನ್ಯಾಯಾಲಯವು ಬುಧವಾರ ಜಾಮೀನು ನಿರಾಕರಿಸಿದೆ. </p>.<p>ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋಮಲ್ ಗರ್ಗ್ ಅವರು, ‘ಈ ಹಂತದಲ್ಲಿ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸುವುದು ಸೂಕ್ತವಲ್ಲ’ ಎಂದರು.</p>.<p>‘ನನ್ನ ಕಕ್ಷಿದಾರರ ವರ್ತನೆಯು ಲೈಂಗಿಕ ಬಯಕೆಯಿಂದ ಕೂಡಿರಲಿಲ್ಲ. ದೂರುದಾರರ ಗೌರವಕ್ಕೆ ಚ್ಯುತಿ ತರುವ ದುರುದ್ದೇಶವನ್ನೂ ಹೊಂದಿರಲಿಲ್ಲ. ಅವರು ಈಗಾಗಲೇ ಸಾಕಷ್ಟು ನೊಂದಿದ್ದಾರೆ. ಅವರನ್ನು ಕೆಲಸದಿಂದಲೂ ವಜಾಗೊಳಿಸಲಾಗಿದೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು’ ಎಂದು ಮಿಶ್ರಾ ಪರ ವಕೀಲರು ಮನವಿ ಮಾಡಿದ್ದರು. </p>.<p>ದೂರುದಾರ ಮಹಿಳೆ ಪರ ವಕೀಲರು ಜಾಮೀನು ನೀಡದಂತೆ ಒತ್ತಾಯಿಸಿದ್ದರು. ‘ನನ್ನ ಕಕ್ಷಿದಾರರಿಗೆ ಪ್ರತಿನಿತ್ಯವೂ ಬೆದರಿಕೆಯ ಸಂದೇಶಗಳನ್ನು ರವಾನಿಸಲಾಗುತ್ತಿದೆ. ಮನೆಗೆ ನುಗ್ಗಿ ಬೆದರಿಕೆ ಹಾಕಲಾಗಿದೆ’ ಎಂದು ತಿಳಿಸಿದ್ದರು. </p>.<p>ದೆಹಲಿ ಪೊಲೀಸರೂ ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸಿದ್ದರು. </p>.<p>‘ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರೋಪಿಯನ್ನು ಪೊಲೀಸರ ವಶಕ್ಕೆ ನೀಡಲು ನಿರಾಕರಿಸಿದ್ದು, ಅದರ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ. ವಿಮಾನದ ಕ್ಯಾಪ್ಟನ್, ಕ್ಯಾಬಿನ್ ಸಿಬ್ಬಂದಿ ಸೇರಿದಂತೆ ಇನ್ನೂ ಹಲವು ಮಂದಿ ಪ್ರತ್ಯಕ್ಷದರ್ಶಿಗಳನ್ನು ವಿಚಾರಣೆಗೆ ಒಳಪಡಿಸಬೇಕಿದೆ’ ಎಂದು ಪೊಲೀಸರ ಪರ ವಕೀಲರು ನ್ಯಾಯಪೀಠಕ್ಕೆ ಹೇಳಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಏರ್ ಇಂಡಿಯಾ ವಿಮಾನದ ಬ್ಯುಸಿನೆಸ್ ಕ್ಲಾಸ್ನಲ್ಲಿ ಪ್ರಯಾಣಿಸುತ್ತಿದ್ದ ಹಿರಿಯ ಮಹಿಳೆ ಮೇಲೆ ಮದ್ಯದ ಅಮಲಿನಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣದ ಆರೋಪಿ ಶಂಕರ್ ಮಿಶ್ರಾಗೆ ಇಲ್ಲಿನ ನ್ಯಾಯಾಲಯವು ಬುಧವಾರ ಜಾಮೀನು ನಿರಾಕರಿಸಿದೆ. </p>.<p>ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋಮಲ್ ಗರ್ಗ್ ಅವರು, ‘ಈ ಹಂತದಲ್ಲಿ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸುವುದು ಸೂಕ್ತವಲ್ಲ’ ಎಂದರು.</p>.<p>‘ನನ್ನ ಕಕ್ಷಿದಾರರ ವರ್ತನೆಯು ಲೈಂಗಿಕ ಬಯಕೆಯಿಂದ ಕೂಡಿರಲಿಲ್ಲ. ದೂರುದಾರರ ಗೌರವಕ್ಕೆ ಚ್ಯುತಿ ತರುವ ದುರುದ್ದೇಶವನ್ನೂ ಹೊಂದಿರಲಿಲ್ಲ. ಅವರು ಈಗಾಗಲೇ ಸಾಕಷ್ಟು ನೊಂದಿದ್ದಾರೆ. ಅವರನ್ನು ಕೆಲಸದಿಂದಲೂ ವಜಾಗೊಳಿಸಲಾಗಿದೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು’ ಎಂದು ಮಿಶ್ರಾ ಪರ ವಕೀಲರು ಮನವಿ ಮಾಡಿದ್ದರು. </p>.<p>ದೂರುದಾರ ಮಹಿಳೆ ಪರ ವಕೀಲರು ಜಾಮೀನು ನೀಡದಂತೆ ಒತ್ತಾಯಿಸಿದ್ದರು. ‘ನನ್ನ ಕಕ್ಷಿದಾರರಿಗೆ ಪ್ರತಿನಿತ್ಯವೂ ಬೆದರಿಕೆಯ ಸಂದೇಶಗಳನ್ನು ರವಾನಿಸಲಾಗುತ್ತಿದೆ. ಮನೆಗೆ ನುಗ್ಗಿ ಬೆದರಿಕೆ ಹಾಕಲಾಗಿದೆ’ ಎಂದು ತಿಳಿಸಿದ್ದರು. </p>.<p>ದೆಹಲಿ ಪೊಲೀಸರೂ ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸಿದ್ದರು. </p>.<p>‘ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರೋಪಿಯನ್ನು ಪೊಲೀಸರ ವಶಕ್ಕೆ ನೀಡಲು ನಿರಾಕರಿಸಿದ್ದು, ಅದರ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ. ವಿಮಾನದ ಕ್ಯಾಪ್ಟನ್, ಕ್ಯಾಬಿನ್ ಸಿಬ್ಬಂದಿ ಸೇರಿದಂತೆ ಇನ್ನೂ ಹಲವು ಮಂದಿ ಪ್ರತ್ಯಕ್ಷದರ್ಶಿಗಳನ್ನು ವಿಚಾರಣೆಗೆ ಒಳಪಡಿಸಬೇಕಿದೆ’ ಎಂದು ಪೊಲೀಸರ ಪರ ವಕೀಲರು ನ್ಯಾಯಪೀಠಕ್ಕೆ ಹೇಳಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>