ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೋಪಿಯಾನ್‌ನಲ್ಲಿ ಭದ್ರತಾ ಪಡೆ ಕಾರ್ಯಾಚರಣೆ: ಉಗ್ರನ ಹತ್ಯೆ

Last Updated 23 ಸೆಪ್ಟೆಂಬರ್ 2021, 6:25 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಯೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಉಗ್ರನೊಬ್ಬ ಹತ್ಯೆಗೀಡಾಗಿದ್ದಾನೆ.

ಅಂಗಡಿಮಾಲೀಕನ ಮೇಲೆ ಬುಧವಾರ ರಾತ್ರಿ ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಉಗ್ರ ಅನಾಯತ್‌ ಅಶ್ರಫ್‌ ದರ್‌ ಹತ್ಯೆಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗಷ್ಟೆ ಈತ ಉಗ್ರಗಾಮಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ. ಮಾದಕ ವಸ್ತು ಕಳ್ಳಸಾಗಣೆಯಂತಹ ಚಟುವಟಿಕೆಗಳಲ್ಲಿ ಈ ಮೊದಲು ಭಾಗಿಯಾಗಿದ್ದ. ಅಕ್ರಮವಾಗಿ ಗಳಿಸಿದ್ದ ಶಸ್ತ್ರಾಸ್ತ್ರದಿಂದ ಸುತ್ತಲಿನ ಜನರನ್ನು ಹೆದರಿಸುತ್ತಿದ್ದ.ಕೇಶ್ವಾ ಗ್ರಾಮದಲ್ಲಿ ಈತ ಅಡಗಿಕೊಂಡಿದ್ದ ಸ್ಥಳದಲ್ಲಿ ಭದ್ರತಾ ಪಡೆಯವರು ಕಾರ್ಯಾಚರಣೆ ನಡೆಸಿದರು ಎಂದು ಪೊಲೀಸರು ಹೇಳಿದ್ದಾರೆ.

‘ಆತನಿಗೆ ಶರಣಾಗುವಂತೆ ಹೇಳಿ ಇಡೀ ರಾತ್ರಿ ಸಮಯ ನೀಡಲಾಗಿತ್ತು. ಆದರೆ ಆತ ಶರಣಾಗಲು ನಿರಾಕರಿಸಿದ. ನಂತರ ನಡೆಸಿದ ಕಾರ್ಯಾಚರಣೆಯಲ್ಲಿ ಹತ್ಯೆಗೀಡಾದ. ಆತನ ಬಳಿಯಿದ್ದ ಒಂದು ಪಿಸ್ತೂಲ್‌ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT