<p><strong>ಕೋಟಾ</strong>: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತಿರುವ ರೈತರು ಕೋಳಿ ಮಾಂಸದ ಬಿರಿಯಾನಿ ತಿನ್ನುವ ಮೂಲಕ ಹಕ್ಕಿ ಜ್ವರ ಹರಡುವ ಹುನ್ನಾರ ನಡೆಸಿದ್ದಾರೆ ಎಂದು ರಾಜಸ್ಥಾನ ಬಿಜೆಪಿ ಶಾಸಕ ಮದನ್ ದಿಲಾವರ್ ವಿವಾದಿತ ಹೇಳಿಕೆಯೊಂದನ್ನು ನೀಡಿದ್ದಾರೆ.</p>.<p>ದೇಶವನ್ನು ನಾಶ ಮಾಡಲು ಬಯಸುತ್ತಿರುವ ಉಗ್ರರು ಮತ್ತು ದರೋಡೆಕೋರರು ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಸೇರಿಕೊಂಡಿರಬಹುದು ಎಂದು ಅವರು ತಿಳಿಸಿದ್ದಾರೆ.</p>.<p>ರೈತರು ಎಂದು ಕರೆಸಿಕೊಳ್ಳುವವರಿಗೆ ದೇಶದ ಬಗ್ಗೆ ಚಿಂತೆ ಇಲ್ಲ. ಅವರೀಗ ಪಿಕ್ನಿಕ್ನಲ್ಲಿದ್ದಾರೆ ಮತ್ತು ಐಷಾರಾಮಿ ಸೌಕರ್ಯಗಳನ್ನು ಅನುಭವಿಸುತ್ತಿದ್ದಾರೆ ಎಂದು ಮದನ್ ದಿಲಾವರ್ ಆರೋಪಿಸಿದ್ದಾರೆ.</p>.<p>ಈ ಸಂಬಂಧ ವಿಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, 'ಹೋರಾಟದ ಸ್ಥಳಗಳಲ್ಲಿ ಕೋಳಿಮಾಂಸವನ್ನು ಸೇವಿಸಲಾಗುತ್ತಿದೆ. ಆ ಮೂಲಕ ಹಕ್ಕಿ ಜ್ವರವನ್ನು ಹರಡಲು ಪ್ರತಿಭಟನಾಕಾರರು ಸಂಚು ರೂಪಿಸುತ್ತಿದ್ದಾರೆ' ಎಂದು ಅವರು ಹೇಳಿದ್ದಾರೆ.</p>.<p>ರಾಜಸ್ಥಾನದ ಕೋಟಾ ಜಿಲ್ಲೆಯ ರಾಮಗಂಜ್ಮಂಡಿ ಶಾಸಕರಾಗಿರುವ ಮದನ್ ದಿಲಾವರ್ ನೀಡಿರುವ ಈ ಹೇಳಿಕೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.</p>.<p>'ಮದನ್ ದಿಲಾವರ್ ಹೇಳಿಕೆ ನಾಚಿಕೆಗೇಡಿನಿಂದ ಕೂಡಿದೆ. ಇದು ಬಿಜೆಪಿಯ ಸಿದ್ದಾಂತವನ್ನು ಪ್ರತಿಬಿಂಬಿಸುತ್ತದೆ' ಎಂದು ರಾಜಸ್ಥಾನ ಕಾಂಗ್ರೆಸ್ ಘಟಕದ ಅಧ್ಯಕ್ಷ ಗೋವಿಂದ್ ಸಿಂಗ್ ದೊತ್ಸಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಟಾ</strong>: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತಿರುವ ರೈತರು ಕೋಳಿ ಮಾಂಸದ ಬಿರಿಯಾನಿ ತಿನ್ನುವ ಮೂಲಕ ಹಕ್ಕಿ ಜ್ವರ ಹರಡುವ ಹುನ್ನಾರ ನಡೆಸಿದ್ದಾರೆ ಎಂದು ರಾಜಸ್ಥಾನ ಬಿಜೆಪಿ ಶಾಸಕ ಮದನ್ ದಿಲಾವರ್ ವಿವಾದಿತ ಹೇಳಿಕೆಯೊಂದನ್ನು ನೀಡಿದ್ದಾರೆ.</p>.<p>ದೇಶವನ್ನು ನಾಶ ಮಾಡಲು ಬಯಸುತ್ತಿರುವ ಉಗ್ರರು ಮತ್ತು ದರೋಡೆಕೋರರು ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಸೇರಿಕೊಂಡಿರಬಹುದು ಎಂದು ಅವರು ತಿಳಿಸಿದ್ದಾರೆ.</p>.<p>ರೈತರು ಎಂದು ಕರೆಸಿಕೊಳ್ಳುವವರಿಗೆ ದೇಶದ ಬಗ್ಗೆ ಚಿಂತೆ ಇಲ್ಲ. ಅವರೀಗ ಪಿಕ್ನಿಕ್ನಲ್ಲಿದ್ದಾರೆ ಮತ್ತು ಐಷಾರಾಮಿ ಸೌಕರ್ಯಗಳನ್ನು ಅನುಭವಿಸುತ್ತಿದ್ದಾರೆ ಎಂದು ಮದನ್ ದಿಲಾವರ್ ಆರೋಪಿಸಿದ್ದಾರೆ.</p>.<p>ಈ ಸಂಬಂಧ ವಿಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, 'ಹೋರಾಟದ ಸ್ಥಳಗಳಲ್ಲಿ ಕೋಳಿಮಾಂಸವನ್ನು ಸೇವಿಸಲಾಗುತ್ತಿದೆ. ಆ ಮೂಲಕ ಹಕ್ಕಿ ಜ್ವರವನ್ನು ಹರಡಲು ಪ್ರತಿಭಟನಾಕಾರರು ಸಂಚು ರೂಪಿಸುತ್ತಿದ್ದಾರೆ' ಎಂದು ಅವರು ಹೇಳಿದ್ದಾರೆ.</p>.<p>ರಾಜಸ್ಥಾನದ ಕೋಟಾ ಜಿಲ್ಲೆಯ ರಾಮಗಂಜ್ಮಂಡಿ ಶಾಸಕರಾಗಿರುವ ಮದನ್ ದಿಲಾವರ್ ನೀಡಿರುವ ಈ ಹೇಳಿಕೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.</p>.<p>'ಮದನ್ ದಿಲಾವರ್ ಹೇಳಿಕೆ ನಾಚಿಕೆಗೇಡಿನಿಂದ ಕೂಡಿದೆ. ಇದು ಬಿಜೆಪಿಯ ಸಿದ್ದಾಂತವನ್ನು ಪ್ರತಿಬಿಂಬಿಸುತ್ತದೆ' ಎಂದು ರಾಜಸ್ಥಾನ ಕಾಂಗ್ರೆಸ್ ಘಟಕದ ಅಧ್ಯಕ್ಷ ಗೋವಿಂದ್ ಸಿಂಗ್ ದೊತ್ಸಾರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>