ನವದೆಹಲಿ: ಗಣಿಗಾರಿಕೆಗುತ್ತಿಗೆ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ(ಐಪಿಎಲ್) ವಿರುದ್ಧ ಜಾರ್ಖಂಡ್ ಸರ್ಕಾರ ಮತ್ತು ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಸ್ವೀಕರಿಸಿದೆ. ಈ ಅರ್ಜಿಗಳ ವಿಚಾರಣಾಯೋಗ್ಯತೆಯನ್ನು ಎತ್ತಿಹಿಡಿದು ತೀರ್ಪು ನೀಡಿದ್ದ ಜಾರ್ಖಂಡ್ ಹೈಕೋರ್ಟ್ನ ಆದೇಶವನ್ನು ಸುಪ್ರಿಂ ಕೋರ್ಟ್ ಅಮಾನ್ಯಗೊಳಿಸಿದೆ.