ನವದೆಹಲಿ: ಮಂಡ್ಯ ಸಂಸದೆ ಸುಮಲತಾ ಅವರು ಶುಕ್ರವಾರ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ, ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ಚಟುವಟಿಕೆಗಳ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿದರು.
ಜಿಲ್ಲೆಯಲ್ಲಿ ಅತಿಯಾಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಂದ ಕೆಆರ್ಎಸ್ ಜಲಾಶಯಕ್ಕೆ ಅಪಾಯ ಎದುರಾಗಿದೆ. ಅಲ್ಲದೆ ಬಂಡೀಪುರ, ನಾಗರಹೊಳೆಯ ವನ್ಯಜೀವಿ ಅಭಯಾರಣ್ಯಗಳಿಗೂ ಸಂಕಷ್ಟ ಎದುರಾಗುವಂತೆ ಮಾಡಿವೆ. ಕಾವೇರಿ ನದಿಯನ್ನೂ ಇದು ಕಲುಷಿತಗೊಳಿಸಿದೆ ಎಂದು ಅವರು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.