<p><strong>ನವದೆಹಲಿ: </strong>'ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದ ಪರೀಕ್ಷೆ ಬರೆದಿದ್ದು, ಶೀಘ್ರವೇ ಫಲಿತಾಂಶ ಹೊರಬೀಳಲಿದೆ' ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಸಚಿವ ಸಿ.ಪಿ. ಯೋಗೇಶ್ವರ ದೆಹಲಿಗೆ ದೌಡಾಯಿಸಿದ್ದಾರೆ.</p>.<p>ಶುಕ್ರವಾರ ತಡರಾತ್ರಿ ಇಲ್ಲಿಗೆ ಬಂದಿರುವ ಅವರು, ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡದೆ ಖಾಸಗಿ ಹೋಟೆಲ್ನಲ್ಲಿ ತಂಗಿದ್ದಾರೆ.</p>.<p>ನಾಯಕತ್ವ ಬದಲಾವಣೆ ಕುರಿತು ಒತ್ತಡ ಹೇರುವ ನಿಟ್ಟಿನಲ್ಲಿ ಅವರು ಕೆಲವು ಮುಖಂಡರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.</p>.<p>ಪಕ್ಷದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ. ರವಿ ಅವರೂ ಇದೇ ವೇಳೆ ದೆಹಲಿಗೆ ಬಂದಿದ್ದು, ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಬಂದಿದ್ದಾಗಿ ತಿಳಿಸಿದ್ದಾರೆ.</p>.<p>'ಯೋಗೇಶ್ವರ ಅವರು ಬಂದಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಸ್ಪಷ್ಡಪಡಿಸಿರುವ ಅವರು, ಪಕ್ಷ ಸಂಘಟನೆ ಕುರಿತು ವರಿಷ್ಠರು ಹಮ್ಮಿಕೊಂಡಿರುವ ಸಭೆಯಲ್ಲಿ ಬಾಗವಹಿಸುವೆ' ಎಂದು ಹೇಳಿದ್ದಾರೆ.</p>.<p>'ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿದ್ದೇನೆ' ಎಂಬ ಸಚಿವ ಸಿ.ಪಿ ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, 'ಪರೀಕ್ಷೆ ಬರೆದವರ ಬಳಿಯೇ ಫಲಿತಾಂಶ ಏನಾಯಿತು ಎಂದು ಕೇಳಬೇಕು. ಅವರು ಯಾವ ಹಿನ್ನಲೆಯಲ್ಲಿ ಆ ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಯೋಗೇಶ್ವರ್ ಜತೆ ಬಂದಿಲ್ಲ' ಎಂದು ರವಿ ತಿಳಿಸಿದ್ದಾರೆ.</p>.<p>'ಕೇಂದ್ರದ ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡುವ ಜವಾಬ್ದಾರಿ ನನಗಿಲ್ಲ. ಪ್ರಧಾನಿ ಮೋದಿ ಅವರು ರಾಷ್ಟ್ರದ ಅಭ್ಯುದಯದ ಹಿನ್ನೆಲೆಯಲ್ಲಿ, ವಿಶಾಲ ಮನೋಭಾವದೊಂದಿಗೆ ಸಂಪುಟ ಪುನರ್ ರಚಿಸಲಿದ್ದಾರೆ' ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>'ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದ ಪರೀಕ್ಷೆ ಬರೆದಿದ್ದು, ಶೀಘ್ರವೇ ಫಲಿತಾಂಶ ಹೊರಬೀಳಲಿದೆ' ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಸಚಿವ ಸಿ.ಪಿ. ಯೋಗೇಶ್ವರ ದೆಹಲಿಗೆ ದೌಡಾಯಿಸಿದ್ದಾರೆ.</p>.<p>ಶುಕ್ರವಾರ ತಡರಾತ್ರಿ ಇಲ್ಲಿಗೆ ಬಂದಿರುವ ಅವರು, ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡದೆ ಖಾಸಗಿ ಹೋಟೆಲ್ನಲ್ಲಿ ತಂಗಿದ್ದಾರೆ.</p>.<p>ನಾಯಕತ್ವ ಬದಲಾವಣೆ ಕುರಿತು ಒತ್ತಡ ಹೇರುವ ನಿಟ್ಟಿನಲ್ಲಿ ಅವರು ಕೆಲವು ಮುಖಂಡರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.</p>.<p>ಪಕ್ಷದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ. ರವಿ ಅವರೂ ಇದೇ ವೇಳೆ ದೆಹಲಿಗೆ ಬಂದಿದ್ದು, ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಬಂದಿದ್ದಾಗಿ ತಿಳಿಸಿದ್ದಾರೆ.</p>.<p>'ಯೋಗೇಶ್ವರ ಅವರು ಬಂದಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಸ್ಪಷ್ಡಪಡಿಸಿರುವ ಅವರು, ಪಕ್ಷ ಸಂಘಟನೆ ಕುರಿತು ವರಿಷ್ಠರು ಹಮ್ಮಿಕೊಂಡಿರುವ ಸಭೆಯಲ್ಲಿ ಬಾಗವಹಿಸುವೆ' ಎಂದು ಹೇಳಿದ್ದಾರೆ.</p>.<p>'ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿದ್ದೇನೆ' ಎಂಬ ಸಚಿವ ಸಿ.ಪಿ ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, 'ಪರೀಕ್ಷೆ ಬರೆದವರ ಬಳಿಯೇ ಫಲಿತಾಂಶ ಏನಾಯಿತು ಎಂದು ಕೇಳಬೇಕು. ಅವರು ಯಾವ ಹಿನ್ನಲೆಯಲ್ಲಿ ಆ ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಯೋಗೇಶ್ವರ್ ಜತೆ ಬಂದಿಲ್ಲ' ಎಂದು ರವಿ ತಿಳಿಸಿದ್ದಾರೆ.</p>.<p>'ಕೇಂದ್ರದ ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡುವ ಜವಾಬ್ದಾರಿ ನನಗಿಲ್ಲ. ಪ್ರಧಾನಿ ಮೋದಿ ಅವರು ರಾಷ್ಟ್ರದ ಅಭ್ಯುದಯದ ಹಿನ್ನೆಲೆಯಲ್ಲಿ, ವಿಶಾಲ ಮನೋಭಾವದೊಂದಿಗೆ ಸಂಪುಟ ಪುನರ್ ರಚಿಸಲಿದ್ದಾರೆ' ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>