‘ದೇಶದ ಸಂವಿಧಾನದ ಏಳನೇ ಪರಿಚ್ಚೇಧದ ಪ್ರಕಾರ ಕಾನೂನು ಸುವ್ಯವಸ್ಥೆ ಮತ್ತು ಪೊಲೀಸ್ ರಾಜ್ಯ ವಿಷಯಗಳಾಗಿವೆ. ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದ ಅಪರಾಧಗಳ ತಡೆಗಟ್ಟುವಿಕೆ, ಪತ್ತೆ, ನೋಂದಣಿ, ತನಿಖೆ ಮತ್ತು ಕಾನೂನು ಕ್ರಮಗಳು ಮುಖ್ಯವಾಗಿ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೇರಿದ್ದಾಗಿದೆ. ಕಾನೂನುಗಳು ಉಲ್ಲಂಘನೆಯಾದಲ್ಲಿ ಕಾನೂನು ಜಾರಿ ಸಂಸ್ಥೆಗಳು ಅಸ್ತಿತ್ವದಲ್ಲಿರುವ ಕಾನೂನುಗಳ ಪ್ರಕಾರವೇ ಕ್ರಮ ಕೈಗೊಳ್ಳುತ್ತಿವೆ’ ಎಂದು ರೆಡ್ಡಿ ಹೇಳಿದರು.