<p><strong>ಕೊಯಮತ್ತೂರು</strong>: ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರನ್ನು ಮಾತಿನ ಮೂಲಕ ಚುಚ್ಚಿರುವ ತಮಿಳುನಾಡು ಸಚಿವ ಎಸ್.ಪಿ.ವೇಲುಮಣಿ, ‘ಅವರ ಹಿರಿಯ ಅಣ್ಣ, ಡಿಎಂಕೆಯಿಂದ ಉಚ್ಚಾಟಿತ ಎಂ.ಕೆ.ಅಳಗಿರಿ ಅವರೇ ಸ್ಟಾಲಿನ್ ರಾಜ್ಯದ ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ ಎಂದಿದ್ದಾರೆ’ ಎಂದು ಹೇಳಿದರು.</p>.<p>ಮುಂಬರುವ ಏಪ್ರಿಲ್–ಮೇ ತಿಂಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಅಧಿಕಾರ ಹಿಡಿಯಲಿದೆ ಎಂದು ಸ್ಟಾಲಿನ್ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ವೇಲುವಣಿ ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<p>ಪೊಂಗಲ್ ಕೊಡುಗೆಗಳನ್ನು ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಾನುವಾರ ಮಧುರೈನಲ್ಲಿ ತನ್ನ ಬೆಂಬಲಿಗರನ್ನು ಉದ್ದೇಶಿಸಿ ಅಳಗಿರಿ ಅವರು ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ’ ಎಂದರು. ‘10.11 ಲಕ್ಷ ಪಡಿತರ ಚೀಟಿ ಹೊಂದಿದವರಿಗೆ ಈ ಹಬ್ಬದ ಕೊಡುಗೆ ದೊರೆಯಲಿದೆ. ಕೊಯಮತ್ತೂರು ಜಿಲ್ಲೆಗೆ ₹269.83 ಕೋಟಿ ಮೀಸಲಿರಿಸಲಾಗಿದೆ’ ಎಂದು ಇದೇ ವೇಳೆ ವೇಲುಮಣಿ ತಿಳಿಸಿದರು. ‘ಜಯಲಲಿತಾ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಈ ಯೋಜನೆ ಪ್ರಾರಂಭಿಸಲಾಗಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಯಮತ್ತೂರು</strong>: ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರನ್ನು ಮಾತಿನ ಮೂಲಕ ಚುಚ್ಚಿರುವ ತಮಿಳುನಾಡು ಸಚಿವ ಎಸ್.ಪಿ.ವೇಲುಮಣಿ, ‘ಅವರ ಹಿರಿಯ ಅಣ್ಣ, ಡಿಎಂಕೆಯಿಂದ ಉಚ್ಚಾಟಿತ ಎಂ.ಕೆ.ಅಳಗಿರಿ ಅವರೇ ಸ್ಟಾಲಿನ್ ರಾಜ್ಯದ ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ ಎಂದಿದ್ದಾರೆ’ ಎಂದು ಹೇಳಿದರು.</p>.<p>ಮುಂಬರುವ ಏಪ್ರಿಲ್–ಮೇ ತಿಂಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಅಧಿಕಾರ ಹಿಡಿಯಲಿದೆ ಎಂದು ಸ್ಟಾಲಿನ್ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ವೇಲುವಣಿ ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<p>ಪೊಂಗಲ್ ಕೊಡುಗೆಗಳನ್ನು ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭಾನುವಾರ ಮಧುರೈನಲ್ಲಿ ತನ್ನ ಬೆಂಬಲಿಗರನ್ನು ಉದ್ದೇಶಿಸಿ ಅಳಗಿರಿ ಅವರು ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ’ ಎಂದರು. ‘10.11 ಲಕ್ಷ ಪಡಿತರ ಚೀಟಿ ಹೊಂದಿದವರಿಗೆ ಈ ಹಬ್ಬದ ಕೊಡುಗೆ ದೊರೆಯಲಿದೆ. ಕೊಯಮತ್ತೂರು ಜಿಲ್ಲೆಗೆ ₹269.83 ಕೋಟಿ ಮೀಸಲಿರಿಸಲಾಗಿದೆ’ ಎಂದು ಇದೇ ವೇಳೆ ವೇಲುಮಣಿ ತಿಳಿಸಿದರು. ‘ಜಯಲಲಿತಾ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಈ ಯೋಜನೆ ಪ್ರಾರಂಭಿಸಲಾಗಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>