ಮಾನವ ಕಳ್ಳಸಾಗಾಣಿಕೆ ನಿಗ್ರಹಕ್ಕೆ ಸಂಬಂಧಪಟ್ಟ ಇತ್ತೀಚಿನ ಕಾನೂನುಗಳ ಕುರಿತು ಪೊಲೀಸರು, ಕಾರ್ಮಿಕರು, ಸಾಮಾಜಿಕ ನ್ಯಾಯ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಹಾಗೂ ನ್ಯಾಯಾಂಗದ ಅಧಿಕಾರಿಗಳ ಅರಿವನ್ನು ಹೆಚ್ಚಿಸಬೇಕು. ಹಾಗೆಯೇ, ಸಂತ್ರಸ್ತರಿಗೆಕಳ್ಳಸಾಗಾಣೆಕಾರರು ಆಮಿಷ ಒಡ್ಡುವ ವಿಧಾನಗಳ ಕುರಿತು ಅಧಿಕಾರಿಗಳನ್ನು ಸೂಕ್ಷ್ಮಗ್ರಾಹಿಗಳಾಗಿಸುವ ನಿಟ್ಟಿನಲ್ಲಿ ರಾಜ್ಯಮಟ್ಟದ ಸಮ್ಮೇಳನಗಳು ಮತ್ತು ನ್ಯಾಯಿಕ ಕಾರ್ಯಾಗಾರಗಳನ್ನು ನಡೆಸುವುದು ಅಗತ್ಯ ಎಂದು ಪತ್ರದಲ್ಲಿ ಬರೆಯಲಾಗಿದೆ.