ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, 'ಸಾಮಾನ್ಯ ಜನರಿಗೆ ನ್ಯಾಯವನ್ನು ಹತ್ತಿರವಾಗಿಸಲು ರಾಷ್ಟ್ರವ್ಯಾಪಿ ಕಾನೂನು ಅರಿವು ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಸಾಮಾನ್ಯ ಜನರ ಹಕ್ಕುಗಳು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (ಎನ್.ಎ.ಎಲ್.ಎಸ್.ಎ) ಮೊಬೈಲ್ ಅಪ್ಲಿಕೇಶನ್, ಅಪ್ಲಿಕೇಶನ್ನಲ್ಲಿರುವ ಪ್ರಮುಖ ಲಕ್ಷಣಗಳು ಮತ್ತು ಸಂತ್ರಸ್ತರಿಗೆ ಪರಿಹಾರ ಯೋಜನೆಗಳ ಮೇಲೆ ಬೆಳಕು ಚೆಲ್ಲುವ ಅಭಿಯಾನ ಇದಾಗಿದೆ' ಎಂದು ತಿಳಿಸಿದ್ದಾರೆ.