ಬಂಧಿತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಸ್ಥಳೀಯರು ಸೋಮವಾರ ಬೆಳಿಗ್ಗೆ ತಿಲಜಾಲಾ ಪ್ರದೇಶದಲ್ಲಿ ರಸ್ತೆ ತಡೆ ನಡೆಸಿದರು. ಮಧ್ಯಾಹ್ನ ಸ್ಥಳೀಯರು ರಸ್ತೆತಡೆ ನಡೆಸಿ, ರೈಲು ಸೇವೆಗಳಿಗೆ ಅಡ್ಡಿಪಡಿಸಿದರು. ಇದೇ ವೇಳೆ ಮೂರು ಪೊಲೀಸ್ ವಾಹನಗಳನ್ನೂ ಧ್ವಂಸಗೊಳಿಸಿದ್ದು, ಒಂದು ವಾಹನವನ್ನು ಸುಟ್ಟುಹಾಕಿದ್ದಾರೆ. ಗುಂಪನ್ನು ಚದುರಿಸಲು ಭದ್ರತಾ ಪಡೆಗಳು ತೆರಳಿದಾಗ ಸ್ಥಳೀಯರು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.