ರಶೀದ್ ಖಾನ್ ಪಠಾಣ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ಎಂ.ಎ.ಶೇಖ್, ‘ನ್ಯಾಯಮೂರ್ತಿ ಚಂದ್ರಚೂಡ್ ಅವರು ಹಲವಾರು ಅಕ್ರಮಗಳನ್ನು ಎಸಗಿರುವ ಆರೋಪ ಎದುರಿಸುತ್ತಿದ್ದಾರೆ. ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳುವಂತೆ ಅವರು ಜನರ ಮೇಲೆ ಒತ್ತಡ ಹೇರಿದ್ದ ಆರೋಪವೂ ಅವರ ಮೇಲಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.