ವಿದ್ಯಾರ್ಥಿಗಳು ಹಿಜಾಬ್ ಮತ್ತು ಕೇಸರಿ ಶಾಲುಗಳನ್ನು ಮನೆಯಲ್ಲೇ ಇರಿಸಿ, ಕೇವಲ ಶಿಕ್ಷಣದತ್ತ ಆಸಕ್ತಿ ತೋರಬೇಕಿದೆ ಎಂದು ಸಲಹೆ ನೀಡಿದ ಅವರು, ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳುವ ಬದಲು, ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದು ಹೇಳಿಕೆ ನೀಡುತ್ತ ಕುಮ್ಮಕ್ಕು ನೀಡುತ್ತಿರುವುದು ಸರಿಯಲ್ಲ. ಇದರಿಂದ ಶಿಕ್ಷಣ ವ್ಯವಸ್ಥೆ ಹದಗೆಡಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.