ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಲಕ್ಷ್ಮೀ’ ವರಿಸಲು ಹೋಗಿ ಜೈಲು ಸೇರಿದವರು: ಡಿಕೆಶಿಗೆ ರೇಣುಕಾಚಾರ್ಯ ತಿರುಗೇಟು

Last Updated 10 ಫೆಬ್ರುವರಿ 2022, 15:49 IST
ಅಕ್ಷರ ಗಾತ್ರ

ಬೆಂಗಳೂರು: ‘ಅವರು ಮುತ್ತುರಾಜ. ಅವರ ಬಗ್ಗೆ ಮಾತಾಡಲ್ಲ. ನಮ್ಮನೆ ಪಕ್ಕದ ಮುತ್ತುರಾಜ್ ಅಲ್ಲ. ಅವರು ಬೇರೆ ಮುತ್ತುರಾಜ’ ಎಂದು ತಮ್ಮ ಬಗ್ಗೆ ವ್ಯಂಗ್ಯವಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರಿಗೆ ಶಾಸಕ ರೇಣುಕಾಚಾರ್ಯ ಅವರು ಟ್ವಿಟರ್‌ ಮೂಲಕ ತಿರುಗೇಟು ನೀಡಿದ್ದಾರೆ.

‘ಅತಿಯಾಗಿ 'ಲಕ್ಷ್ಮೀ' ವರಿಸಲು ಹೋಗಿ ತಿಹಾರ್ ಜೈಲಿಗೆ ಹೋದವರಿಗೆ ನನ್ನ ಬಗ್ಗೆ ಮಾತನಾಡವ ನೈತಿಕತೆ ಇಲ್ಲ’ ಎಂದು ರೇಣುಕಾಚಾರ್ಯ ಗುಡುಗಿದ್ದಾರೆ.

ಅಲ್ಲದೇ, ‘ಗಾಜಿನ ಮನೆಯಲ್ಲಿದ್ದೀರಿ ಡಿಕೆಶಿ, ಹುಶಾರ್’ ಎಂದು ಎಚ್ಚರಿಸಿರುವ ರೇಣುಕಾಚಾರ್ಯ, ‘ಮಾತು ನಿಮ್ಮೊಬ್ಬರ ಸ್ವತ್ತಲ್ಲ’ ಎಂದೂ ಹೇಳಿದ್ದಾರೆ.

'ಬಿಕಿನಿ ಅಥವಾ ಹಿಜಾಬ್‌ ಧರಿಸುವುದು ಮಹಿಳೆಯರ ಹಕ್ಕು' ಎಂಬ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಹೇಳಿಕೆಯನ್ನು ವಿರೋಧಿಸಿದ್ದ ರೇಣುಕಾಚಾರ್ಯ ‘ವಿದ್ಯಾರ್ಥಿನಿಯರು ಮೈತುಂಬ ಬಟ್ಟೆ ಹಾಕಿಕೊಳ್ಳಬೇಕು. ಯಾಕೆಂದರೆ ಮಹಿಳೆಯರು ಧರಿಸುವ ಉಡುಪುಗಳನ್ನು ನೋಡಿ ಪುರುಷರು ಉದ್ರೇಕಗೊಳ್ಳುತ್ತಾರೆ. ಅದರಿಂದ ಅತ್ಯಾಚಾರ ಪ್ರಕರಣಗಳೂ ಹೆಚ್ಚುತ್ತವೆ’ ಎಂದಿದ್ದರು.

ಇದಕ್ಕೆ ಪ್ರತಿಕ್ರಿಯಿಸುವ ವೇಳೆ ಡಿಕೆಶಿ, ರೇಣುಕಾಚಾರ್ಯ ಅವರನ್ನು ‘ಮುತ್ತುರಾಜ’ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT