ಬಂಧಿತರನ್ನು ಬಿಡಿಸಿಕೊಂಡು ಬರಲೆಂದು ಪೊಲೀಸ್ ಠಾಣೆಗೆ ತೆರಳಿದ್ದಾಗ ಪೊಲೀಸರು ₹10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶನಿವಾರ ಬೆಳಿಗ್ಗೆ ಬಂಧಿತ ವ್ಯಕ್ತಿಯ ಪತ್ನಿ ಹಣ ತೆಗೆದುಕೊಂಡು ಠಾಣೆಗೆ ಹೋಗಿದ್ದರು. ಆದರೆ, ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ದೊರೆಯಿತು. ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದು ತಿಳಿಯಿತು ಎಂದು ವ್ಯಾಪಾರಿಯ ಕುಟುಂಬದವರು ಆರೋಪಿಸಿದ್ದಾರೆ.