ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಜೋರಾಂ: ಅಡಿಕೆ ಕಳ್ಳ ಸಾಗಣೆ ಶಂಕೆ, ಆರು ವಾಹನಗಳಿಗೆ ಬೆಂಕಿ

Last Updated 11 ಡಿಸೆಂಬರ್ 2022, 15:54 IST
ಅಕ್ಷರ ಗಾತ್ರ

ಐಜ್ವಾಲ್, ಮಿಜೋರಾಂ: ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ಆರೋಪದ ಮೇಲೆ, ರಾಜ್ಯದ ಮಮಿತ್‌ ಜಿಲ್ಲೆಯಲ್ಲಿ ಗುಂಪೊಂದು ಕನಿಷ್ಠ ಆರು ವಾಹನಗಳಿಗೆ ಬೆಂಕಿ ಹಚ್ಚಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಭಾನುವಾರ ಹೇಳಿದ್ದಾರೆ.

‘ಝಮುವಾಂಗ್‌ ಮತ್ತು ಝಾಲ್‌ನುವಾಮ್‌ ಎಂಬ ಗ್ರಾಮಗಳ ಬಳಿ, ರಾಷ್ಟ್ರೀಯ ಹೆದ್ದಾರಿ 108ರಲ್ಲಿ ಶನಿವಾರ ಈ ಘಟನೆ ನಡೆದಿದೆ. 50 ಜನರಿದ್ದ ಗುಂಪು, ವಾಹನಗಳನ್ನು ತಡೆದು ಬೆಂಕಿ ಹಚ್ಚಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಾಲ್‌ತಾಂಗ್‌ಪುಯಿ ಪುಲಮ್ಟೆ ಹೇಳಿದ್ದಾರೆ.

‘ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ. ಯಾರೂ ಈ ಘಟನೆಯ ಹೊಣೆ ಹೊತ್ತುಕೊಂಡಿಲ್ಲ ಹಾಗೂ ಈ ವರೆಗೆ ಯಾರನ್ನೂ ಬಂಧಿಸಲಾಗಿಲ್ಲ’ ಎಂದು ಅವರು ತಿಳಿಸಿದ್ದಾರೆ.

ಮ್ಯಾನ್ಮಾರ್‌ನಿಂದ ಅಡಿಕೆಯನ್ನು ಕಳ್ಳ ಸಾಗಣೆ ಮಾಡಲಾಗುತ್ತಿದ್ದು, ಇದನ್ನು ತಡೆಯಬೇಕು ಎಂದು ಮಮಿತ್‌ ಜಿಲ್ಲೆಯ ಅಡಿಕೆ ಬೆಳೆಗಾರರ ಸಂಘ ಕಳೆದ ತಿಂಗಳು ಒತ್ತಾಯಿಸಿತ್ತು. ಕಳ್ಳಸಾಗಣೆ ತಡೆಯದಿದ್ದರೆ ಮುಂದಾಗುವ ಯಾವುದೇ ಅಹಿತಕರ ಘಟನೆಗೆ ತಾನು ಹೊಣೆಯಲ್ಲ ಎಂದೂ ಸಂಘ ಎಚ್ಚರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT