<p><strong>ನವದೆಹಲಿ:</strong> ‘ಸೇನೆಯ ಆಧುನೀಕರಣ ಪ್ರಕ್ರಿಯೆ ಯಾವುದೇ ಅಡ್ಡಿ–ಆತಂಕಗಳಲ್ಲಿದೆಯೇ ಮುಂದುವರಿದಿದೆ. ದೇಶದ ಗಡಿ ರಕ್ಷಣೆಗೆ ಬೇಕಾದ ಶಸ್ತ್ರಾಸ್ತ್ರಗಳ ಖರೀದಿಗೆ ಹಣಕಾಸಿನ ಕೊರತೆಯೂ ಇಲ್ಲ’ ಎಂದು ಸೇನಾಪಡೆ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಹೇಳಿದ್ದಾರೆ.</p>.<p>ಪೂರ್ವ ಲಡಾಖ್ನ ಗಡಿಯಲ್ಲಿ ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ) ಬಳಿ ಚೀನಾದೊಂದಿಗೆ ಸುದೀರ್ಘ ಸಂಘರ್ಷ ಏರ್ಪಟ್ಟ ಹಿನ್ನೆಲೆಯಲ್ಲಿ ಸೇನೆಯ ಆಧುನೀಕರಣಕ್ಕೆ ಹಿನ್ನಡೆಯಾಗಬಹುದು ಎಂಬ ಆತಂಕವನ್ನು ಅವರು ನಿರಾಕರಿಸಿದ್ದಾರೆ.</p>.<p>ಪಿಟಿಐ ಸುದ್ದಿಸಂಸ್ಥೆಗೆ ವಿಶೇಷ ಸಂದರ್ಶನ ನೀಡಿರುವ ಅವರು ,‘ಸೇನೆಯ ಆಧುನೀಕರಣಕ್ಕೆ ಅಗತ್ಯವಿರುವ ಅನುದಾನವನ್ನು ಸರ್ಕಾರ ಒದಗಿಸಿದೆ’ ಎಂದು ಹೇಳಿದರು.</p>.<p>‘ವಿವಿಧ ಯುದ್ಧೋಪಕರಣ ಸೇರಿದಂತೆ ಅಗತ್ಯ ಸಾಮಗ್ರಿಗಳ ಪೂರೈಕೆಗಾಗಿಕಳೆದ ಹಣಕಾಸು ವರ್ಷದಲ್ಲಿ ₹ 21,000 ಕೋಟಿ ಮೊತ್ತದ 59 ಗುತ್ತಿಗೆಗಳಿಗೆ ಅನುಮೋದನೆ ನೀಡಲಾಗಿದೆ. ಇತರ ಖರೀದಿ ಪ್ರಕ್ರಿಯೆಗೆ ಅನುದಾನ ಕೋರಿ ಪ್ರಸ್ತಾವಗಳನ್ನು ಸಲ್ಲಿಸಲಾಗಿದೆ’ ಎಂದರು.</p>.<p class="Subhead">‘ಕ್ವಾಡ್ ಎಂಬುದು ಮಿಲಿಟರಿ ಮೈತ್ರಿಯಲ್ಲ’: ಕ್ವಾಡ್ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಇದು ಮಿಲಿಟರಿ ಶಕ್ತಿ ಬಳಕೆಗಾಗಿ ಮಾಡಿಕೊಂಡಿರುವ ಮೈತ್ರಿ ಅಲ್ಲ. ಈ ಬಗ್ಗೆ ಕೆಲವು ರಾಷ್ಟ್ರಗಳು ಭಯ ಹುಟ್ಟಿಸುವ ಕಾರ್ಯದಲ್ಲಿ ತೊಡಗಿವೆ‘ ಎಂದು ಪ್ರತಿಕ್ರಿಯಿಸಿದರು.</p>.<p>‘ಇಂಡೊ–ಪೆಸಿಫಿಕ್ ಪ್ರದೇಶ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು, ಪ್ರಾದೇಶಿಕ ಸ್ಥಿರತೆ ಕಾಪಾಡುವ ನಿಟ್ಟಿನಲ್ಲಿ ರಚಿಸಿಕೊಂಡಿರುವ ಬಹುಪಕ್ಷೀಯ ಗುಂಪು ಇದು’ ಎಂದೂ ಸ್ಪಷ್ಟಪಡಿಸಿದರು.</p>.<p>ಭಾರತ, ಅಮೆರಿಕ, ಜಪಾನ್ ಹಾಗೂ ಆಸ್ಟ್ರೇಲಿಯಾ ‘ಕ್ವಾಡ್’ನ ಸದಸ್ಯ ರಾಷ್ಟ್ರಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಸೇನೆಯ ಆಧುನೀಕರಣ ಪ್ರಕ್ರಿಯೆ ಯಾವುದೇ ಅಡ್ಡಿ–ಆತಂಕಗಳಲ್ಲಿದೆಯೇ ಮುಂದುವರಿದಿದೆ. ದೇಶದ ಗಡಿ ರಕ್ಷಣೆಗೆ ಬೇಕಾದ ಶಸ್ತ್ರಾಸ್ತ್ರಗಳ ಖರೀದಿಗೆ ಹಣಕಾಸಿನ ಕೊರತೆಯೂ ಇಲ್ಲ’ ಎಂದು ಸೇನಾಪಡೆ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಹೇಳಿದ್ದಾರೆ.</p>.<p>ಪೂರ್ವ ಲಡಾಖ್ನ ಗಡಿಯಲ್ಲಿ ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ) ಬಳಿ ಚೀನಾದೊಂದಿಗೆ ಸುದೀರ್ಘ ಸಂಘರ್ಷ ಏರ್ಪಟ್ಟ ಹಿನ್ನೆಲೆಯಲ್ಲಿ ಸೇನೆಯ ಆಧುನೀಕರಣಕ್ಕೆ ಹಿನ್ನಡೆಯಾಗಬಹುದು ಎಂಬ ಆತಂಕವನ್ನು ಅವರು ನಿರಾಕರಿಸಿದ್ದಾರೆ.</p>.<p>ಪಿಟಿಐ ಸುದ್ದಿಸಂಸ್ಥೆಗೆ ವಿಶೇಷ ಸಂದರ್ಶನ ನೀಡಿರುವ ಅವರು ,‘ಸೇನೆಯ ಆಧುನೀಕರಣಕ್ಕೆ ಅಗತ್ಯವಿರುವ ಅನುದಾನವನ್ನು ಸರ್ಕಾರ ಒದಗಿಸಿದೆ’ ಎಂದು ಹೇಳಿದರು.</p>.<p>‘ವಿವಿಧ ಯುದ್ಧೋಪಕರಣ ಸೇರಿದಂತೆ ಅಗತ್ಯ ಸಾಮಗ್ರಿಗಳ ಪೂರೈಕೆಗಾಗಿಕಳೆದ ಹಣಕಾಸು ವರ್ಷದಲ್ಲಿ ₹ 21,000 ಕೋಟಿ ಮೊತ್ತದ 59 ಗುತ್ತಿಗೆಗಳಿಗೆ ಅನುಮೋದನೆ ನೀಡಲಾಗಿದೆ. ಇತರ ಖರೀದಿ ಪ್ರಕ್ರಿಯೆಗೆ ಅನುದಾನ ಕೋರಿ ಪ್ರಸ್ತಾವಗಳನ್ನು ಸಲ್ಲಿಸಲಾಗಿದೆ’ ಎಂದರು.</p>.<p class="Subhead">‘ಕ್ವಾಡ್ ಎಂಬುದು ಮಿಲಿಟರಿ ಮೈತ್ರಿಯಲ್ಲ’: ಕ್ವಾಡ್ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಇದು ಮಿಲಿಟರಿ ಶಕ್ತಿ ಬಳಕೆಗಾಗಿ ಮಾಡಿಕೊಂಡಿರುವ ಮೈತ್ರಿ ಅಲ್ಲ. ಈ ಬಗ್ಗೆ ಕೆಲವು ರಾಷ್ಟ್ರಗಳು ಭಯ ಹುಟ್ಟಿಸುವ ಕಾರ್ಯದಲ್ಲಿ ತೊಡಗಿವೆ‘ ಎಂದು ಪ್ರತಿಕ್ರಿಯಿಸಿದರು.</p>.<p>‘ಇಂಡೊ–ಪೆಸಿಫಿಕ್ ಪ್ರದೇಶ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು, ಪ್ರಾದೇಶಿಕ ಸ್ಥಿರತೆ ಕಾಪಾಡುವ ನಿಟ್ಟಿನಲ್ಲಿ ರಚಿಸಿಕೊಂಡಿರುವ ಬಹುಪಕ್ಷೀಯ ಗುಂಪು ಇದು’ ಎಂದೂ ಸ್ಪಷ್ಟಪಡಿಸಿದರು.</p>.<p>ಭಾರತ, ಅಮೆರಿಕ, ಜಪಾನ್ ಹಾಗೂ ಆಸ್ಟ್ರೇಲಿಯಾ ‘ಕ್ವಾಡ್’ನ ಸದಸ್ಯ ರಾಷ್ಟ್ರಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>