<p><strong>ನವದೆಹಲಿ</strong>: ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡುತ್ತಿದ್ದಾಗ ‘ಮೋದಿ–ಅದಾನಿ ಭಾಯಿ–ಭಾಯಿ’ ಎಂಬ ಘೋಷಣೆ ಕೇಳಿ ಬಂದಿದೆ.</p>.<p>ಪ್ರಧಾನಿ ಮೋದಿ ಮಾತು ಆರಂಭಿಸುತ್ತಿದ್ದಂತೆ ಘೋಷಣೆ ಕೂಗಲು ಆರಂಭಿಸಿದ ವಿರೋಧ ಪಕ್ಷಗಳ ಸದಸ್ಯರು, ಸದನದ ಬಾವಿಯತ್ತ ಧಾವಿಸಿದರು.</p>.<p>ಇದೇವೇಳೆ, ಅದಾನಿ ವಿರುದ್ಧ ಹಿಂಡೆನ್ಬರ್ಗ್ ನೀಡಿರುವ ವರದಿಯಲ್ಲಿ ಉಲ್ಲೇಖಿಸಲಾಗಿರುವ ವಂಚನೆ ಮತ್ತು ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳ ಸದಸ್ಯರು, ‘ವಿ ವಾಂಟ್ ಜೆಪಿಸಿ’ಎಂದು ಘೋಷಣೆ ಕೂಗಿದರು.<br /><br />ಪ್ರತಿಪಕ್ಷಗಳ ಸದಸ್ಯರ ಘೋಷಣೆಗೆ ಪ್ರತಿಕ್ರಿಯಿಸಿದ ಮೋದಿ, ನೀವು ಕೆಸರನ್ನು ಎರಚಿದಷ್ಟೂ ಕಮಲ ಅರಳುತ್ತದೆ ಎಂದು ಹೇಳಿದರು.</p>.<p>ಇವನ್ನೂ ಓದಿ.. </p>.<p><a href="https://www.prajavani.net/india-news/sc-agrees-to-hear-friday-plea-seeking-probe-into-hindenburg-research-report-on-adani-firms-1013809.html" itemprop="url">ಅದಾನಿ ಅಕ್ರಮ ತನಿಖೆಗೆ ಕೋರಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ </a></p>.<p><a href="https://www.prajavani.net/india-news/it-is-clear-pm-modi-protecting-adani-rahul-gandhi-1013779.html" itemprop="url">ಮೋದಿಯಿಂದ ಅದಾನಿ ರಕ್ಷಣೆ: ರಾಹುಲ್ ಆರೋಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡುತ್ತಿದ್ದಾಗ ‘ಮೋದಿ–ಅದಾನಿ ಭಾಯಿ–ಭಾಯಿ’ ಎಂಬ ಘೋಷಣೆ ಕೇಳಿ ಬಂದಿದೆ.</p>.<p>ಪ್ರಧಾನಿ ಮೋದಿ ಮಾತು ಆರಂಭಿಸುತ್ತಿದ್ದಂತೆ ಘೋಷಣೆ ಕೂಗಲು ಆರಂಭಿಸಿದ ವಿರೋಧ ಪಕ್ಷಗಳ ಸದಸ್ಯರು, ಸದನದ ಬಾವಿಯತ್ತ ಧಾವಿಸಿದರು.</p>.<p>ಇದೇವೇಳೆ, ಅದಾನಿ ವಿರುದ್ಧ ಹಿಂಡೆನ್ಬರ್ಗ್ ನೀಡಿರುವ ವರದಿಯಲ್ಲಿ ಉಲ್ಲೇಖಿಸಲಾಗಿರುವ ವಂಚನೆ ಮತ್ತು ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳ ಸದಸ್ಯರು, ‘ವಿ ವಾಂಟ್ ಜೆಪಿಸಿ’ಎಂದು ಘೋಷಣೆ ಕೂಗಿದರು.<br /><br />ಪ್ರತಿಪಕ್ಷಗಳ ಸದಸ್ಯರ ಘೋಷಣೆಗೆ ಪ್ರತಿಕ್ರಿಯಿಸಿದ ಮೋದಿ, ನೀವು ಕೆಸರನ್ನು ಎರಚಿದಷ್ಟೂ ಕಮಲ ಅರಳುತ್ತದೆ ಎಂದು ಹೇಳಿದರು.</p>.<p>ಇವನ್ನೂ ಓದಿ.. </p>.<p><a href="https://www.prajavani.net/india-news/sc-agrees-to-hear-friday-plea-seeking-probe-into-hindenburg-research-report-on-adani-firms-1013809.html" itemprop="url">ಅದಾನಿ ಅಕ್ರಮ ತನಿಖೆಗೆ ಕೋರಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ </a></p>.<p><a href="https://www.prajavani.net/india-news/it-is-clear-pm-modi-protecting-adani-rahul-gandhi-1013779.html" itemprop="url">ಮೋದಿಯಿಂದ ಅದಾನಿ ರಕ್ಷಣೆ: ರಾಹುಲ್ ಆರೋಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>