ಇದೇವೇಳೆ, ಅದಾನಿ ವಿರುದ್ಧ ಹಿಂಡೆನ್ಬರ್ಗ್ ನೀಡಿರುವ ವರದಿಯಲ್ಲಿ ಉಲ್ಲೇಖಿಸಲಾಗಿರುವ ವಂಚನೆ ಮತ್ತು ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳ ಸದಸ್ಯರು, ‘ವಿ ವಾಂಟ್ ಜೆಪಿಸಿ’ಎಂದು ಘೋಷಣೆ ಕೂಗಿದರು.
ಪ್ರತಿಪಕ್ಷಗಳ ಸದಸ್ಯರ ಘೋಷಣೆಗೆ ಪ್ರತಿಕ್ರಿಯಿಸಿದ ಮೋದಿ, ನೀವು ಕೆಸರನ್ನು ಎರಚಿದಷ್ಟೂ ಕಮಲ ಅರಳುತ್ತದೆ ಎಂದು ಹೇಳಿದರು.