ಆಕಾಶವಾಣಿಯ, ‘ಮನದ ಮಾತು’ ಕಾರ್ಯಕ್ರಮದಲ್ಲಿ ಮಸೂದೆಯ ವಿಚಾರ ಪ್ರಸ್ತಾಪಿಸಿದ ಮೋದಿ, ‘ಯುಪಿಎ ಸರ್ಕಾರದ ಎರಡನೇ ಅವಧಿಯಲ್ಲಿ ಕೆಲವು ಉತ್ಪನ್ನಗಳನ್ನು ಎಪಿಎಂಸಿ ಕಾಯ್ದೆ ವ್ಯಾಪ್ತಿಯಿಂದ ಹೊರಗಿಡಲಾಯಿತು. ಇದಾದ ನಂತರ, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಉತ್ತರಪ್ರದೇಶ ಮುಂತಾದ ರಾಜ್ಯಗಳ ರೈತರು ತಮಗೆ ಬೇಕಾದ ಕಡೆ ಕೃಷಿ ಉತ್ಪನ್ನಗಳನ್ನು ಮಾರಾಟಮಾಡಿ, ಆದಾಯ ಹೆಚ್ಚಿಸಿಕೊಂಡಿದ್ದಾರೆ’ ಎಂದರು.